ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

Date:

Advertisements

”ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ” ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಹೇಳಿದ್ದಾರೆ.

ಮಾರ್ಚ್‌ 9ರಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ಇತ್ತೀಚೆಗೆ ಕೆಲ ಸುದ್ದಿಗಳು ಹರಿದಾಡುತ್ತಿದೆ. ಅದರಲ್ಲಿ ಕೆಲವು ಸತ್ಯವಾಗಿದ್ದು, ಕೆಲವು ಸುಳ್ಳು ಇರಬಹುದು. ಅದರ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ” ಎಂದರು.

“ಜನರು ನೀರನ್ನು ಮಿತವ್ಯಯವಾಗಿ ಬಳಸಬೇಕು. ನಗರದಲ್ಲಿರುವ ಹಲವು ಅಪಾರ್ಟ್ಮೆಂಟ್ಗಳು ಬೋರ್‌ವೆಲ್‌ ನೀರನ್ನೇ ಅವಲಂಬಿಸಿವೆ. ಈ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಈಗ ಅಂತರ್ಜಲ ಮಟ್ಟ ಕುಸಿದ ಕಾರಣ ಬೋರ್ವೆಲ್ಬತ್ತಿ ಹೋಗಿವೆ. ಇದೀಗ ಕಾವೇರಿ ನೀರಿನ ಮೇಲೆ ಅವಲಂಬಿತವಾಗಿವೆ. ಇದರಿಂದ, ಬೆಂಗಳೂರು ನಗರದ ಹೊರವಲಯದಲ್ಲಿ ಹೆಚ್ಚಾಗಿ ನೀರಿನ ಸಮಸ್ಯೆ ಉಂಟಾಗುತ್ತಿದೆ. ಸದ್ಯ ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ತಜ್ಞರ ಜತೆಗೆ ಚರ್ಚಿಸಿದ್ದೇವೆ” ಎಂದರು.

”ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಇನ್ನು 1470 ಎಂಎಲ್ಡಿ ನೀರು ಪಂಪ್ಮಾಡಲು ಅವಕಾಶವಿದೆ. ನಮ್ಮ ಸಾಮರ್ಥ್ಯಕ್ಕಿಂತ 20 ಟಿಎಂಸಿ ನೀರು ಹೆಚ್ಚಿಗೆ ಪಂಪ್ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದೆ. 1.54 ಟಿಎಂಸಿ ಪ್ರತಿ ತಿಂಗಳು ಅವಶ್ಯಕತೆಯಿದೆ. ಜುಲೈ ತಿಂಗಳವರೆಗೆ 17 ಟಿಎಂಸಿ ಅವಶ್ಯಕತೆ ಇದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X