ಚಿಕ್ಕಮಗಳೂರು| ಬಜರಂಗದಳ ಮಾಜಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಬಜರಂಗದಳದ ಮಾಜಿ ಸಂಚಾಲಕ ತುಡುಕೂರು ಮಂಜುನಾಥ್‌ಗೆ ಗಡಿಪಾರು ನೋಟಿಸ್ ನೀಡಲಾಗಿದ್ದು, ಜಿಲ್ಲಾಧಿಕಾರಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಮಾರ್ಚ್ 6ರಂದು ಈ ಗಡಿಪಾರು ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು, ಮಾರ್ಚ್ 14ರಂದು ವಿಚಾರಣೆಗೆ ಹಾಜರಾಗಲು ತಿಳಿಸಿದೆ.

ಜಿಲ್ಲಾಧಿಕಾರವು ಸುಮಾರು 17 ಕಾರಣಗಳನ್ನು ನೀಡಿ ತುಡುಕೂರು ಮಂಜುನಾಥ್‌ಗೆ ಗಡಿಪಾರು ನೋಟಿಸ್ ನೀಡಿದ್ದು, ರಾಜಕೀಯ ಲಾಭಕ್ಕಾಗಿ ಗಲಭೆ ಉಂಟು ಮಾಡುವ ಸಾಧ್ಯತೆಯನ್ನು ಒತ್ತಿ ಹೇಳಿದೆ. “ಚಿಕ್ಕಮಗಳೂರು ಜಿಲ್ಲೆಯು ಮತೀಯ ಸೂಕ್ಷ್ಮ ಪ್ರದೇಶವಾಗಿದೆ, ಇಲ್ಲಿ ಮತೀಯ ಗಲಭೆ ಉಂಟು ಮಾಡುವ ಸಾಧ್ಯತೆಯಿದೆ. ಜೊತೆಗೆ ಗುರುದತ್ತಾತ್ರೇಯ ಬಾಬಾಬುಡನ್ ದರ್ಗಾ ವಿವಾದದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ಮಂಜುನಾಥ್‌ ನೀಡಿದ್ದಾರೆ” ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಂಜುನಾಥ್ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಹೋಬಳಿ ತುಡುಕೂರು ಗ್ರಾಮದ ನಿವಾಸಿಯಾಗಿದ್ದು, ಮಂಜುನಾಥ್ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ಮತ್ತು 7 ಮುಂಜಾಗ್ರತಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 22 ಪ್ರಕರಣ ಖುಲಾಸೆಯಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಯುವತಿಗೆ ಅಸಭ್ಯ ಮೆಸೇಜ್ ಮಾಡಿದ್ದ ಕಾರಣಕ್ಕೆ ಹುದ್ದೆಯಿಂದ ಉಚ್ಛಾಟನೆಯಾಗಿದ್ದರು.

ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಜನರ ಶಾಂತಿ, ನೆಮ್ಮದಿ, ಭದ್ರತೆಗೆ ಹಾನಿ ಮಾಡಿದ್ದಾರೆ ಮತ್ತು ಈ ಮೂಲಕ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಇದನ್ನು ನಿಯಂತ್ರಿಸಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕೆಲವು ತಿಂಗಳುಗಳ ಹಿಂದೆ ರಾಜ್ಯ ಸರ್ಕಾರವು ಮಂಗಳೂರಿನ ಮೂವರು ಸಂಘಪರಿವಾರದ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿತ್ತು ಎಂಬುವುದನ್ನು ಸ್ಮರಿಸಬಹುದು. ಗಡಿಪಾರಾದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಕಾಶ್ ಶಕ್ತಿನಗರ ಯುವತಿಯ ಜೊತೆ ನಿಂತಿದ್ದ ಎಂಬ ಕಾರಣಕ್ಕೆ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X