ಬೀದರ್ ಕ್ಷೇತ್ರದಲ್ಲಿ ಬಿ.ಆರ್ ಪಾಟೀಲ್ ಸ್ಪರ್ಧಿಸಿದರೆ ಗೆಲುವಿಗೆ ಶ್ರಮಿಸುವೆ: ಸಚಿವ ಈಶ್ವರ ಖಂಡ್ರೆ

Date:

Advertisements

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಬೀದರ್‌ನಿಂದ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದ್ದಾರೆ.

“ಮಾ.7ರಂದು ಬಸವಕಲ್ಯಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿನಂದನಾ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಆಸನ ನೀಡಿರಲಿಲ್ಲ ಎಂದು ಬಿ.ಆರ್.ಪಾಟೀಲ್ ಅವರ ಅಸಮಾಧಾನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರ ಖಂಡ್ರೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ತಾವೇ ಸ್ವತಃ ಬಿ.ಆರ್.ಪಾಟೀಲರಿಗೆ 2 ಬಾರಿ ದೂರವಾಣಿ ಕರೆ ಮಾಡಿ ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೆ, ಆದರೆ ಅವರು ಕಾರ್ಯಕ್ರಮಕ್ಕೆ ಬಂದಿದ್ದು ತಮ್ಮ ಗಮನಕ್ಕೇ ಬಂದಿಲ್ಲ ನಂತರ ಫೋನ್ ಮಾಡಿದರೂ ಕರೆ ಸ್ವೀಕರಿಸಲಿಲ್ಲ” ಎಂದು ತಿಳಿಸಿದ್ದಾರೆ.

“ವೇದಿಕೆಯ ಮೊದಲ ಸಾಲಿನಲ್ಲಿ ಬಿ.ಆರ್. ಪಾಟೀಲ್ ಅವರ ಹೆಸರಿನ ಚೀಟಿ ಅಂಟಿಸಿ ಪ್ರತ್ಯೇಕ ಆಸನ ಮೀಸಲಿಡಲಾಗಿತ್ತು. ನಾನೇ ಹಿಂದಿನ ರಾತ್ರಿ ಖುದ್ದು ಎಲ್ಲ ಆಹ್ವಾನಿತರ ಹೆಸರನ್ನು ಆಸನಗಳ ಮೇಲೆ ಅಂಟಿಸಿರುವುದನ್ನು ಖಾತ್ರಿಪಡಿಸಿಕೊಂಡಿದ್ದೆ, ಆದರೆ ಹಿರಿಯರಾದ ಬಿ.ಆರ್.ಪಾಟೀಲ್ ಅವರು ಕಾರ್ಯಕ್ರಮಕ್ಕೆ
ಬಂದಿದ್ದನ್ನು ತಾವು ಗಮನಿಸಿಲ್ಲ. ಅವರು ಬಂದಿರುವುದು ನನಗೆ ತಿಳಿದಿಲ್ಲ. ಅರಿಯದೇ ಆಗಿರುವ ಅಚಾತುರ್ಯಕ್ಕೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಹೇಳಿದ್ದಾರೆ.

Advertisements

“ಬೀದರ್‌ನಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಮತ್ತು 371(ಜೆ) ದಶಮಾನೋತ್ಸವ ಕಾರ್ಯಕ್ರಮವನ್ನು ಹಲವು ಸಂಘ ಸಂಸ್ಥೆಗಳು ಸೇರಿ ನಡೆಸಿದ್ದವು. ಅಲ್ಲಿ ಸಹ ಅವರಿಗೆ ಆಸನ ಇಡಲಾಗಿತ್ತೋ ಇಲ್ಲವೋ ಅದು ತಮಗೆ ತಿಳಿದಿಲ್ಲ. ಆ ಬಗ್ಗೆ ಈವರೆಗೆ ಬಿ.ಆರ್. ಪಾಟೀಲ್ ಅವರು ತಮ್ಮ ಗಮನಕ್ಕೂ ತಂದಿಲ್ಲ” ಎಂದು ಹೇಳಿದ್ದಾರೆ.

“ತಮ್ಮ ತಂದೆ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕೂಡ ಬಿ.ಆರ್. ಪಾಟೀಲ್ ಅವರ ಹೆಸರು ಹಾಕಿಸಿದ್ದೆ. ಕರೆ ಮಾಡಿ ಆಹ್ವಾನಿಸಿದ್ದೆ. ಅವರ ಹೆಸರಿನಲ್ಲಿ ಆಸನವನ್ನೂ ಮೀಸಲಿಡಲಾಗಿತ್ತು. ಆದರೆ ಅದೇಕೆ ಅವರು ನನ್ನ ವಿರುದ್ಧ ಅಸಮಾಧಾನ ಆಗಿದ್ದಾರೋ ತಿಳಿಯದಾಗಿದೆ” ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಓದು | ನಡುಬಗ್ಗಿಸದ ಎದೆಯ ದನಿ: ಶೂದ್ರ ಯುವಕರು ಓದಬೇಕಾದ ಪುಸ್ತಕ

“ಬಿ.ಆರ್. ಪಾಟೀಲ್ ಅವರು ನಮ್ಮ ಪಕ್ಷದ ಮತ್ತು ನಮ್ಮ ಸಮುದಾಯದ ಶಾಸಕರಾಗಿದ್ದು, ಅವರ ಬಗ್ಗೆ ನನಗೆ ಅಪಾರ ಪ್ರೀತಿ, ಗೌರವ ಇದೆ. ನಾನು ಉದ್ದೇಶಪೂರ್ವಕವಾಗಿ ಅವರಿಗೆ ಅವಮಾನ ಮಾಡುವ ಪ್ರಮೇಯವೇ ಬರುವುದಿಲ್ಲ. ತಿಳಿದೋ ತಿಳಿಯದೆಯೋ ಅಚಾತುರ್ಯವಾಗಿದ್ದು, ಅವರ ಮನಸ್ಸಿಗೆ ನೋವಾಗಿದೆ. ಇದಕ್ಕಾಗಿ ವಿಷಾದಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X