‘ಮೋದಿ ಗ್ಯಾರಂಟಿಗೆ ಝೀರೋ ವ್ಯಾರಂಟಿ’; ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

Date:

Advertisements

ಬಿಜೆಪಿಯ ಮೋದಿ ಗ್ಯಾರಂಟಿಯನ್ನು ಟೀಕೆ ಮಾಡಿರುವ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಮೋದಿ ಗ್ಯಾರಂಟಿಗೆ ಜಿರೋ ವ್ಯಾರಂಟಿ” ಎಂದಿದ್ದಾರೆ. ಬಿಜೆಪಿಯನ್ನು ‘ಹೊರಗಿನವರು’ ಎಂದಿರುವ ಅಭಿಷೇಕ್, “ಬಿಜೆಪಿಯವರು ಪಶ್ಚಿಮ ಬಂಗಾಳದ ವಿರೋಧಿಗಳು” ಎಂದು ಆರೋಪಿಸಿದರು.

2024ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷಗಳು ಬಿಡುಗಡೆ ಮಾಡುತ್ತಿದ್ದು ರಾಜಕೀಯ ಮುಖಂಡರುಗಳು ಪರಸ್ಪರ ವಾಗ್ದಾಳಿಯನ್ನು ಕೂಡಾ ನಡೆಸುತ್ತಿದ್ದಾರೆ. ಭಾನುವಾರ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಜನ ಗರ್ಜನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.


“ಬಿಜೆಪಿಯವರು ಬರೀ ಚುನಾವಣೆ ಬಂದಾಗ ಮಾತ್ರ ಪಶ್ಚಿಮ ಬಂಗಾಳಕ್ಕೆ ಬರುತ್ತಾರೆ, ಅವರು ಹೊರಗಿನವರು, ಬಂಗಾಳ ವಿರೋಧಿಗಳು” ಎಂದಿರುವ ಬ್ಯಾನರ್ಜಿ, “ರಾಜ್ಯದ ನಿಧಿಯನ್ನು ನೀಡದಿರುವ ಕೇಸರಿ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಂಗಾಳದ ಜನರು ಉತ್ತರ ನೀಡುತ್ತಾರೆ” ಎಂದರು.

Advertisements

“ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪಕ್ಷ ಮಾತ್ರ ನೀಡಿದ ಭರವಸೆಯನ್ನು ಈಡೇರಿಸುತ್ತದೆ. ಬಿಜೆಪಿ ಮತ್ತು ಅದರ ನಾಯಕರುಗಳು ಬಂಗಾಳ ವಿರೋಧಿಗಳು. ಹಾಗಾಗಿ ರಾಜ್ಯಕ್ಕೆ ನೀಡಬೇಕಾದ ಹಣವನ್ನು ನೀಡದೆ ಬಾಕಿ ಉಳಿಸಿದ್ದಾರೆ” ಎಂದು ಆರೋಪಿಸಿದರು. “ಕೇಂದ್ರ ಸರ್ಕಾರವು ನಡೆಸುವ ಇಡಿ ಮತ್ತು ಸಿಬಿಐ ದಾಳಿಗಳು ಯಾವುದೇ ಪರಿಣಾಮ ಬೀರದು” ಎಂದು ಈ ಸಂದರ್ಭದಲ್ಲೇ ಹೇಳಿದರು.

ಟಿಎಂಸಿ ಅಭ್ಯರ್ಥಿಗಳ ಘೋಷಣೆ

ಟಿಎಂಸಿ ಭಾನುವಾರ ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು ಪಟ್ಟಿಯಲ್ಲಿ ಭಾರತ ತಂಡ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಹೆಸರು ಕೂಡಾ ಕಾಣಿಸಿಕೊಂಡಿದೆ. ಯೂಸುಫ್ ಪಠಾಣ್ ಬಹರಂಪುರದಿಂದ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕನಾಗಿರುವ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಮಾಜಿ ಸಂಸದೆ ಮಹುವಾ ಮೊಯಿತ್ರಾ ಕೃಷ್ಣನಗರದಿಂದ ಸ್ಪರ್ಧಿಸಿದರೆ, ಮಮತಾ ಬ್ಯಾನರ್ಜಿ ಸೋದರಳಿಯ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸಲಿದ್ದಾರೆ. ನಟ ಶತ್ರುಘ್ನ ಸಿನ್ಹಾ ಅಸನ್ಸೋಲ್‌ನಿಂದ ಕಣಕ್ಕಿಳಿದರೆ, 1983ರಲ್ಲಿ ಭಾರತ ವಿಶ್ವಕಪ್‌ ಗೆದ್ದ ಕ್ರಿಕೆಟ್‌ ತಂಡದ ಸದಸ್ಯ ಕೀರ್ತಿ ಅಜಾದ್‌ ದುರ್ಗಾಪುರ ಬುರ್ದ್ವಾನ್‌ನಿಂದ ಕಣಕ್ಕಿಳಿಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X