ನಂಬಿಕೆ ನಕ್ಷೆ, ಹೊಸ ಆಸ್ತಿ ತೆರಿಗೆ, ಖಾತಾ ವ್ಯವಸ್ಥೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ ‘ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, ‘ಹೊಸ ಆಸ್ತಿ ತೆರಿಗೆ ವ್ಯವಸ್ಥೆ’ ಹಾಗೂ ‘ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು ‘ಬಿಬಿಎಂಪಿ ಖಾತಾ ವಿತರಣೆ ಯೋಜನೆ)ಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಈ ವೇಳೆ ವಸತಿ ಸಚಿವರಾದ ಬಿ‌.ಝಡ್ ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಶಾಸಕರಾದ ರಿಜ್ವಾನ್ ಹರ್ಷದ್, ಮಾಜಿ ಶಾಸಕರಾದ ಮಂಜುನಾಥ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು “ಬಿಬಿಎಂಪಿ ಖಾತಾ” ವಿತರಣೆ ಯೋಜನೆಯ ಮಾಹಿತಿ

Advertisements

ಕ್ರಮಬದ್ಧವಲ್ಲದ ಮತ್ತು ಅನಧಿಕೃತ ಸ್ವತ್ತುಗಳಿಗೆ ಆಸ್ತಿತೆರಿಗೆ ಸಂಗ್ರಹಿಸಲು ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 ಉಪ ಪ್ರಕರಣ 6 ಅವಕಾಶ ಕಲ್ಪಿಸುತ್ತದೆ. ಆದರೆ ಸ್ವತ್ತುಗಳು ಸರ್ಕಾರದ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಸೇರಿದ ಜಮೀನುಗಳಲ್ಲಿ ಇರಬಾರದು.

ಬಿಬಿಎಂಪಿಯ ಸುರಕ್ಷಿತ ಅನೈನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದು, ಇದರಲ್ಲಿ ನಾಗರೀಕರು ಬಿಬಿಎಂಪಿಯ ಆಸ್ತಿ ತೆರಿಗೆ ನೋಂದಣಿ” ಯಲ್ಲಿ ತಮ್ಮ ಆಸ್ತಿಗಳನ್ನು ನಮೂದಿಸಲು ಆನೈನ್ನಲ್ಲಿ ಅರ್ಜಿ ಸಲ್ಲಿಸುತ್ತಾರೆ. ತದನಂತರ ನಾಗರೀಕರು ತಮ್ಮ ಆಸ್ತಿ ತೆರಿಗೆಯನ್ನು ತಕ್ಷಣವೇ ಪಾವತಿಸಲು ಮತ್ತು ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ಪಡೆಯಬಹುದಾಗಿರುತ್ತದೆ.

ಲಕ್ಷಗಟ್ಟಲೆ ಆಸ್ತಿ ಮಾಲೀಕರಿಗೆ ಇದು ವಿಶೇಷ ಅವಕಾಶವಾಗಿದ್ದು, 31/7/2024 ರವರೆಗೆ ನೀಡಲಾಗುತ್ತಿರುವ ಒಂದು ಬಾರಿ ಪರಿಹಾರ (OTS) ಯೋಜನೆ ಅಡಿಯಲ್ಲಿ ಬಡ್ಡಿ ಮತ್ತು ಇತರೆ ವಿನಾಯಿತಿಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಲು ನಾಗರೀಕರಿಗೆ ಅನುವು ಮಾಡಿಕೊಡುತ್ತದೆ.

ನಾಗರೀಕರು ತಮ್ಮ ಮೊಬೈಲ್ ಮತ್ತು ಔಖಿಕ ಬಳಸಿ ಲಾಗಿನ್ ಮಾಡಬೇಕು ಮತ್ತು ಆಧಾರ್ ಮೂಲಕ ಅವರ ಗುರುತನ್ನು ದೃಢೀಕರಿಸಬೇಕು ಮತ್ತು ಅಸ್ತಿಯ ಮಾಲಿಕರ & ಅಸ್ತಿಯ ಛಾಯಾಚಿತ್ರ ಮತ್ತು GPS ಅನ್ನು ಅಪ್ಲೋಡ್ ಮಾಡಬೇಕು. ನಾಗರೀಕರು ಮಾಲೀಕರ ಮತ್ತು ಆಸ್ತಿ ವಿವರಗಳನ್ನು ನಮೂದಿಸುತ್ತಾರೆ. ನೋಂದಾಯಿತ ಪತ್ರ ಮತ್ತು ಇತರ ದಾಖಲೆಗಳನ್ನು ಸಹ ಅಪ್ಲೋಡ್ ಮಾಡಬೇಕು. ಇದನ್ನು ಬಿಬಿಎಂಪಿ “ಖಾತಾ” ಗಾಗಿ ಸಲ್ಲಿಸುವ ಅರ್ಜಿ ಎಂದು ಪರಿಗಣಿಸಲಾಗುತ್ತದೆ.

ಬಿಬಿಎಂಪಿಯು ಸ್ವಯಂಚಾಲಿತವಾಗಿ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ನೀಡುತ್ತದೆ ಮತ್ತು ನಾಗರೀಕರು ನೀಡಿದ ಸ್ವತ್ತಿನ ಉಪಯೋಗದ ವಿವರಗಳ ಪ್ರಕಾರ ಆಸ್ತಿತೆರಿಗೆಯನ್ನು ತಕ್ಷಣವೇ ಪಾವತಿಸಲು ಅನುವು ಮಾಡಿಕೊಡುತ್ತದೆ. ಬಿಬಿಎಂಪಿಯು ಖಾತೆಗಾಗಿ ಸಲ್ಲಿಸಿರುವ ಅರ್ಜಿಗೆ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯೊಂದಿಗೆ ಸರಿಯಾದ ಸ್ವೀಕೃತಿಯನ್ನು ನೀಡಲಾಗುವುದು.

ಬಿಬಿಎಂಪಿಯು ಸ್ವೀಕರಿಸಿದ ಅರ್ಜಿಯನ್ನು ಕಾಲಮಿತಿಯಲ್ಲಿ ಪ್ರಕ್ರಿಯೆಗೊಳಿಸುತ್ತದೆ ಹಾಗೂ ಕಾನೂನು ಮತ್ತು ನಿಯಮಗಳ ಪ್ರಕಾರ ಬಿಬಿಎಂಪಿಯ ಸೂಕ್ತ ಆಸ್ತಿತೆರಿಗೆ ವಹಿಯಲ್ಲಿ ಆಸ್ತಿಯನ್ನು ನಮೂದಿಸುತ್ತದೆ. ಬಿಬಿಎಂಪಿಯು ಸ್ವತ್ತನ್ನು ಆಸ್ತಿತೆರಿಗೆ ವಹಿಯಲ್ಲಿ ನಮೂದಿಸಿದ ತಕ್ಷಣವೇ, “ಖಾತಾ” ಮತ್ತು ಅಂತಿಮ ಹಾಗೂ ಶಾಶ್ವತ ಆಸ್ತಿತೆರಿಗೆ ಸಂಖ್ಯೆಯನ್ನು ನೀಡಲಾಗುವುದು.

ಯೋಜನೆಯ ಆನೈನ್ ಅರ್ಜಿಗಳನ್ನು 20ನೇ ಮಾರ್ಚ್ 2024ರ ನಂತರ https://bbmptax.karnataka.gov.inಗೆ ಸಂಪರ್ಕಿಸಬಹುದು.

ನಾಗರಿಕರು ತಮ್ಮ ಸ್ಥಳೀಯ ಸಹಾಯಕ ಕಂದಾಯ ಅಧಿಕಾರಿಯವರನ್ನು ಸಂಪರ್ಕಿಸಬಹುದು ಅವರು ಅನೈನ್ ವ್ಯವಸ್ಥೆಯಲ್ಲಿ ಅರ್ಜಿಯನ್ನು ನಮೂದಿಸುತ್ತಾರೆ ಹಾಗೂ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ಮತ್ತು ಸ್ವೀಕೃತಿಯನ್ನು ರಚಿಸುತ್ತಾರೆ. ಹಾಗೂ ನಾಗರಿಕರು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಲು ಮತ್ತು ” ಬಿಬಿಎಂಪಿ ಖಾತಾ’ಗಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತಾರೆ. ಈ ಸೌಲಭ್ಯವು ಶೀಘ್ರದಲ್ಲೇ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಲಭ್ಯವಾಗಲಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X