ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

Date:

Advertisements

ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ. ಎನ್ ವಿಶ್ವನಾಥ್ ನಾಯಕ, ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆಯಿಂದ ಅತಿ ಹೆಚ್ಚು ಮಂದಿ, ಬೆಂಗಳೂರು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಕಾರ್ಮಿಕರು ವಲಸೆ ಹೋಗುತ್ತಾರೆ. ಅಲ್ಲದೆ, ಇಲ್ಲಿಂದ ಸಾಕಷ್ಟು ಜನ ಬೆಂಗಳೂರಿಗೆ ದಿನನಿತ್ಯ ತೆರಳುವುದರಿಂದ ಕೆಲವೊಂದು ರೈಲು ಇಲ್ಲಿ ನಿಲ್ಲುತ್ತಿಲ್ಲ. ಎಲ್ಲ ರೈಲುಗಳನ್ನು ಸಹ ಇಲ್ಲಿ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಇಲ್ಲಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ತೇರಳುವುದರಿಂದ, ಅತಿಹೆಚ್ಚು ಆದಾಯ ನೀಡುವ ನಮ್ಮ ಯಾದಗಿರಿ ರೈಲ್ವೇ ಸ್ಟೇಷನ್ ಇದಾಗಿದೆ. ಇಲ್ಲಿಂದ ತೆರಳುವ ಕೂಲಿ ಕಾರ್ಮಿಕರಿಗೆ ಬಡ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ,  ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಕಡ್ಡಾಯವಾಗಿ ಯಾದಗಿರಿಯಲ್ಲಿ ನಿಲ್ಲಿಸಲು ಅಗತ್ಯ ಕ್ರಮ  ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಇಲ್ಲವಾದಲ್ಲಿ ಬರುವ ಸಂಸದರ ಚುಣಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಅದ ಕಾರಣ ಇಲ್ಲಿನ ಜನತೆಗೆ ವಂದೇ ಭಾರತ ರೈಲನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ರೈಲ್ವೇ ಸ್ಟೇಷನ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X