ತುಮಕೂರು | ಮುಜರಾಯಿ ದೇವಸ್ಥಾನದ ಜಮೀನು ಉಳಿಸಿ: ಚೌಕೇನಹಳ್ಳಿ ಗ್ರಾಮಸ್ಥರ ಮನವಿ

Date:

Advertisements

ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗುತ್ತಿದ್ದ ಕೊಡುಗೆ ಜಮೀನು ಮತ್ತೊಬ್ಬರಿಗೆ ಮಾರಾಟವಾಗುತ್ತಿದೆ. ದೇವಸ್ಥಾನದ ಜಮೀನು ದೇವಾಲಯದ ಆಸ್ತಿಯಾಗಿಯೇ ಉಳಿಯಲಿ ಎಂದು ತುಮಕೂರು ತಹಶೀಲ್ದಾರ್ ಬಿ ಆರತಿ ಅವರಿಗೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಚೌಕೇನಹಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಚೌಕೇನಹಳ್ಳಿ ಗ್ರಾಮದ ಇತಿಹಾಸಯುಳ್ಳ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಐದು ಎಕರೆ ಜಮೀನು ಕೊಡುಗೆಯಾಗಿ ಅರ್ಚಕರ ಕುಟುಂಬಕ್ಕೆ ಸೇರಿದೆ. ದೇವಾಲಯದ ಕೈಂಕರ್ಯ ಮಾಡಿಕೊಂಡು ನಿತ್ಯ ಪೂಜೆ, ಜಾತ್ರೆ ಇನ್ನಿತರ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ಕುಟುಂಬದ ಜೀವನಕ್ಕೆ ಆಧಾರವಾಗಿರುವ ಈ ಜಮೀನಿನ ಪೈಕಿ ಒಂದು ಎಕರೆ ಮಾರಾಟವಾಗಿ ಕಾನೂನು ರೀತ್ಯಾ ದಾಖಲೆ ಸಿದ್ಧವಾಗುವ ವಿಚಾರ ತಿಳಿದುಬಂದಿದೆ. ಇದನ್ನರಿತ ಗ್ರಾಮಸ್ಥರು ದೇವಾಲಯದ ಅಭಿವೃದ್ಧಿಗೆ ಈ ಜಮೀನು ಬಳಕೆಯಾಗಬೇಕು ಅಥವಾ ಅಲ್ಲಿನ ಅರ್ಚಕರ ಜೀವನಕ್ಕೆ ಬಳಕೆಯಾಗಬೇಕು. ಆದರೆ ಮಾರುಕಟ್ಟೆ ಬೆಲೆಗೆ ಲಕ್ಷಾಂತರ ರೂ.ಗಳಿಗೆ ಮಾರಾಟವಾಗುವುದು ಸರಿ ಎನಿಸಲಿಲ್ಲ. ದೇವಾಲಯಕ್ಕೆ ಕೊಡುಗೆ ಜಮೀನು ಉಳಿಸಿ ಎಂದು ತಹಶೀಲ್ದಾರ್ ಬಳಿ ಚರ್ಚಿಸಿದರು.

“ಕಾನೂನು ರೀತ್ಯಾ ಪರಭಾರೆ ಆಗಿದ್ದರೂ ದೇವಾಲಯದ ಅಭಿವೃದ್ಧಿಗೆ ಪೂರಕವಲ್ಲದ ಈ ಘಟನೆ ಇಡೀ ಗ್ರಾಮಕ್ಕೆ ಬೇಸರ ತಂದಿದೆ. ಅರ್ಚಕರ ಜೀವನಕ್ಕೆ ಕೊಡುಗೆ ಜಮೀನು ಉಳಿಸಿಕೊಳ್ಳಬೇಕಿದೆ. ಆದರೆ ಮತ್ತೊಬ್ಬರಿಗೆ ಮಾರಾಟ ಮಾಡುವುದು ಸೂಕ್ತವಲ್ಲ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ದೇವಾಲಯ ಅಭಿವೃದ್ಧಿಗೆ ಇರುವ ಕೊಡುಗೆ ಜಮೀನುಗಳನ್ನು ದೇವಾಲಯದ ಆಸ್ತಿ ಎಂದು ಘೋಷಣೆ ಮಾಡಿ ಜಮೀನು ಉಳಿಸಿ ಗ್ರಾಮಗಳ ಪುರಾತನ ದೇವಾಲಯ ಬೆಳೆಸಬೇಕು” ಎಂದು ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಸ್ಮಶಾನವಿಲ್ಲದೆ ಅರಣ್ಯ, ಕೆರೆ ದಂಡೆ, ಕಾಡಿನ ಬದಿ, ಜಮೀನುಗಳಲ್ಲಿ ಶವ ಸಂಸ್ಕಾರ

“ಜಿಲ್ಲಾಡಳಿತವೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮೂಲಕ ಮುಜರಾಯಿ ದೇವಾಲಯದ ಕೊಡುಗೆ ಜಮೀನು ದೇವಾಲಯಕ್ಕೆ ಉಳಿಸಬೇಕು” ಎಂದು ಚೌಕೇನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X