ಚುನಾವಣಾ ಬಾಂಡ್ | ಸುಪ್ರೀಂ ಆದೇಶದ ಬಳಿಕ ಪಾತಾಳಕ್ಕಿಳಿದ ಎಸ್‌ಬಿಐ ಷೇರು

Date:

Advertisements

ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಅವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರ ಬೆನ್ನಲ್ಲೇ ಷೇರುಪೇಟೆಯಲ್ಲಿ ಎಸ್‌ಬಿಐ ಷೇರುಗಳು ಪಾತಾಳಕ್ಕಿಳಿದಿದೆ.

ನಾಲ್ಕು ತಿಂಗಳುಗಳ ಅವಕಾಶ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಾಳೆಯೇ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಆದೇಶವನ್ನು ಪ್ರಕಟಿಸುತ್ತಿದ್ದಂತೆಯೇ ಎಸ್‌ಬಿಐ ಷೇರು ಸುಮಾರು ಶೇಕಡ 2ರಷ್ಟು ಕುಸಿದಿದೆ.

ಸಂಜೆ 3:30ರ ಸಮಯಕ್ಕೆ ಎಸ್‌ಬಿಐ ಷೇರು ಶೇಕಡ 2ರಷ್ಟು ಇಳಿದು 773.95 ರೂಪಾಯಿಗೆ ತಲುಪಿದೆ. ಈ ಹಿಂದಿನ ವಹಿವಾಟಿನಲ್ಲಿದ್ದ ಎಸ್‌ಬಿಐ ಷೇರಿನ ದರಕ್ಕಿಂತ ಈ ದರದಲ್ಲಿ ನಾವು 15 ರೂಪಾಯಿ ವ್ಯತ್ಯಾಸವನ್ನು ಕಾಣಬಹುದು.

Advertisements

ಎಸ್‌ಬಿಐ ಇಂಟ್ರಾಡೇ ವಹಿವಾಟಿನಲ್ಲಿ 771ರ ಕನಿಷ್ಠಮಟ್ಟಕ್ಕೆ ಇಳಿದಿದೆ. ಆದರೆ ಎಸ್‌ಬಿಐನ ಈ ಷೇರು ಕುಸಿತಕ್ಕೆ ಸುಪ್ರೀಂ ಕೋರ್ಟ್‌ನ ಆದೇಶ ಮಾತ್ರವಲ್ಲ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರ ನಕಾರಾತ್ಮಕ ಭಾವನೆ ಕೂಡಾ ಕಾರಣವೆಂದು ತಜ್ಞರು ಹೇಳುತ್ತಾರೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ, ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿಆರ್‌ ಗವಾಯ್, ಜೆಬಿ ಪಾರ್ದಿವಾಲಾ, ಮನೋಜ್ ಮಿಶ್ರಾರನ್ನು ಒಳಗೊಂಡ ಪಂಚ ಸದಸ್ಯ ಪೀಠವು ಇಂದು ಎಸ್‌ಬಿಐನ ಅರ್ಜಿಯ ವಿಚಾರಣೆ ನಡೆಸಿದೆ.

“ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿ ಇರುವುದಾಗಿ ಎಸ್‌ಬಿಐ ತನ್ನ ಅರ್ಜಿಯಲ್ಲೇ ಹೇಳಿಕೊಂಡಿದೆ” ಎಂದು ಒತ್ತಿ ಹೇಳಿರುವ ಸುಪ್ರೀಂ ಮಾಹಿತಿ ಚುನಾವಣಾ ಆಯೋಗಕ್ಕೆ ನೀಡಲು ಒಂದೇ ದಿನದ ಅವಕಾಶವನ್ನು ನೀಡಿದೆ.

ಅಲ್ಲದೆ ಎಲ್ಲ ಮಾಹಿತಿಯನ್ನು ಒಟ್ಟುಗೂಡಿಸಿ ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್‌ 15 ಸಂಜೆ 5 ಗಂಟೆಯೊಳಗೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಆದೇಶಿಸಿದೆ.

ಚುನಾವಣಾ ಬಾಂಡ್‌ಗಳ ಬಗ್ಗೆ ಫೆ.15 ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಪ್ರಕ್ರಿಯೆ ಅಸಾಂವಿಧಾನಿಕ ಹಾಗೂ ನಾಗರಿಕರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು. ಎಸ್‌ಬಿಐಗೆ ಚುನಾವಣಾ ಬಾಂಡ್‌ನ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಮಾರ್ಚ್‌ 6ರವರೆಗೆ ಸಮಯ ನೀಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X