ವಸತಿ ಶಾಲೆ ಬಾಲಕಿ ಆತ್ಮಹತ್ಯೆ ಪ್ರಕರಣ | ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಾಲಕಿ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು, “ವಸತಿ ಶಾಲೆಯ ಮಕ್ಕಳಿಗೆ ಆಪ್ತಸಮಾಲೋಚನೆ ನಡೆಸಲಾಗುವುದು” ಎಂದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ ರೂ. 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.

ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ತಹಸೀಲ್ದಾರ ಇದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ರಸ್ತೆ ಅಪಘಾತ; ಪರಿಹಾರ ವಿತರಣೆ

ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.

ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಮೃತ ಆರು ಮಂದಿಯ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.

ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X