ರಾಯಚೂರು | ಇವಿಎಂ ಬೇಡ, ಬ್ಯಾಲೆಟ್ ಬೇಕು ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್‌ ಪ್ರತಿಭಟನೆ

Date:

Advertisements

ಆಡಳಿತ ಪಕ್ಷದವರ ಅಪೇಕ್ಷೆಗೆ ತಕ್ಕಂತೆ ಇವಿಎಂಗಳನ್ನು ತಿರುಚಬಹುದು ಎಂಬುದನ್ನು ತಾಂತ್ರಿಕ ತಜ್ಞರು ಸಾಬೀತುಪಡಿಸಿದ್ದರಿಂದ ಇವಿಎಂ ಬೇಡ. ಬ್ಯಾಲೆಟ್ ಮತ ಪತ್ರದ ಮೂಲಕ ಚುನಾವಣೆ ನಡೆಯಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್‌ ರಾಯಚೂರು ತಾಲೂಕು ಸಮಿತಿ ಒತ್ತಾಯಿಸಿದೆ.

ರಾಯಚೂರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷ 2024ನೇ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಮತಯಂತ್ರ ಬೇಡವೆ ಬೇಡ. ಮತಪತ್ರದ ಮೂಲಕ ಲೋಕಸಭಾ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ ನಡೆಸಿತು.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಸಮೀಕ್ಷೆಯಲ್ಲಿ ವಿಫಲರಾದ ಅನೇಕ ಅಭ್ಯರ್ಥಿಗಳು ನಿಜವಾದ ಚುನಾವಣೆಯಲ್ಲಿ ಗೆದ್ದಿರುವುದು ಆಶ್ಚರ್ಯವೇನಿಲ್ಲ. ಇದಕ್ಕೆ ಯಂತ್ರಗಳ ಟ್ಯಾಂಪರ್ ಆಗಿರುವುದು ಮುಖ್ಯ ಕಾರಣ ಎಂದು ಆರೋಪಿಸಿದರು.

Advertisements

ಕನಿಷ್ಠ, ಜನರು ಮತದಾನದ ನಂತರ, ಅವರು ಯಾವ ಪಕ್ಷಕ್ಕೆ ಮತ ಚಲಾಯಿಸಿದ್ದಾರೆ ಎಂಬುದನ್ನು ಸೂಚಿಸಲು ಸ್ವೀಕೃತಿ ಚೀಟಿಯನ್ನು ಸ್ವೀಕರಿಸಬೇಕು ಮತ್ತು ಅದನ್ನು ಸಂಗ್ರಹಿಸಬೇಕು ಮತ್ತು ಆ ಸ್ವೀಕೃತಿ ಚೀಟಿಗಳ ಆಧಾರದ ಮೇಲೆ ಮತಗಳನ್ನು ಎಣಿಸಬೇಕು ಎಂದರು.

ವಿವಿಧ ರಾಜ್ಯಗಳಲ್ಲಿ ಹಲವು ಪಕ್ಷಗಳು ಇವಿಎಂಗಳ ಮೇಲೆ ಇದೇ ರೀತಿಯ ಸಮಸ್ಯೆಗಳನ್ನು ಎತ್ತಿದ್ದವು. ಆದರೆ, ಭಾರತೀಯ ಚುನಾವಣಾ ಆಯೋಗವು (ಇಸಿಐ) ಅವುಗಳನ್ನು ಪರಿಹರಿಸುವ ಭರವಸೆ ನೀಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಆರೋಪಗಳನ್ನು ತಳ್ಳಿಹಾಕಲು ಸರಿಯಾದ ಉತ್ತರವನ್ನೂ ನೀಡುತ್ತಿಲ್ಲ. ಇಸಿಐ ಮೂಕ ಪ್ರೇಕ್ಷಕರಾಗಿರುವುದರಿಂದ, ಇದು ಚುನಾವಣಾ ಆಯೋಗದ ಮೇಲೂ ಅನುಮಾನವನ್ನು ಹುಟ್ಟುಹಾಕುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮೊದಲಿದ್ದಂತೆ ಮತಪತ್ರದ (ಬ್ಯಾಲೆಟ್) ಮೂಲಕ ಪಾರದರ್ಶಕ ಚುನಾವಣೆಯನ್ನು ನಡೆಸಲು ನಮ್ಮ ಪಕ್ಷವು ಆಗ್ರಹಿಸುತ್ತದೆ. ಹಾಗಾಗಿ ಯಂತ್ರಚಾಲಿತ ಮತ ಯಂತ್ರವನ್ನು ಬಂದ್ ಮಾಡಿ ಜನತಾಂತ್ರಿಕ ಮತ ಪತ್ರದ ಚುನಾವಣೆಗೆ ಮುಂದಾಗಬೇಕೇಂದು ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿ. ಅಮರೇಶ್, ಅಜೀಜ್ ಜಾಗೀರ್ದಾರ್, ಮಲ್ಲಯ್ಯ ಕಟ್ಟಿಮನಿ, ನಿರಂಜನ್ ಕುಮಾರ್, ಆನಂದ್ ಕುಮಾರ್, ಲಕ್ಷ್ಮಣ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X