ಮುಖ್ಯಕಚೇರಿ ಹೊರತುಪಡಿಸಿ ಬೈಜೂಸ್‌ನ ಎಲ್ಲ ಕಚೇರಿ ಬಂದ್; ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್’

Date:

Advertisements

ನಿರಂತರವಾಗಿ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಿರುವ ಬೈಜೂಸ್ ಸಂಸ್ಥೆ ಈಗ ಬೆಂಗಳೂರಿನಲ್ಲಿರುವ ತನ್ನ ಮುಖ್ಯ ಕಚೇರಿಯನ್ನು ಹೊರತುಪಡಿಸಿ ಉಳಿದೆಲ್ಲ ಕಚೇರಿಗಳನ್ನು ಮುಚ್ಚಿದೆ. ಜೊತೆಗೆ 14,000 ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್’ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸುಮಾರು ಒಂದು ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸುವ ಬೆಂಗಳೂರಿನಲ್ಲಿರುವ ತನ್ನ ಮುಖ್ಯಕಚೇರಿ ಬಿಟ್ಟು ದೇಶದಾದ್ಯಂತ ಇರುವ ಉಳಿದೆಲ್ಲ ಕಚೇರಿಯನ್ನು ಬೈಜೂಸ್ ಮುಚ್ಚಿದೆ. ಕಳೆದ ಕೆಲವು ತಿಂಗಳುಗಳಿಂದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಬೈಜೂಸ್, ಈ ಕಚೇರಿಗಳ ಒಪ್ಪಂದವನ್ನು ಮತ್ತೆ ಮಾಡಿಕೊಳ್ಳದೆ ಖಾಲಿ ಮಾಡಿದೆ ಎಂದು ವರದಿ ಉಲ್ಲೇಖಿಸಿದೆ. ಆದರೆ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿರುವ ಸುಮಾರು 300ರಷ್ಟು ಟ್ಯೂಷನ್ ಸೆಂಟರ್‌ಗಳನ್ನು ಬೈಜೂಸ್ ಮುಚ್ಚಿಲ್ಲ.

ಇನ್ನು ಕಳೆದ ತಿಂಗಳು ಷೇರುದಾರರು ಬೈಜೂ ರವೀಂದ್ರನ್‌ರನ್ನು ಸಿಇಒ ಸ್ಥಾನದಿಂದ ಕೆಳಗಿಳಿಸುವುದರ ಪರವಾಗಿ ಮತ ಚಲಾಯಿಸಿದ್ದಾರೆ. ಆದರೆ ಈ ನಿರ್ಣಯವನ್ನು ತಿರಸ್ಕರಿಸಿರುವ ಬೈಜೂಸ್, “ಕೆಲವೇ ಷೇರುದಾರರು ಇರುವಾಗ ಕೈಗೊಂಡ ನಿರ್ಣಯ ಇದಾಗಿದೆ, ಇದನ್ನು ಮಾನ್ಯ ಮಾಡಲಾಗದು” ಎಂದು ಹೇಳಿದೆ.

Advertisements

ಈ ಬಿಕ್ಕಟ್ಟಿನ ಮಧ್ಯೆ ಬೈಜೂ ರವೀಂದ್ರನ್ ತನ್ನ ಪ್ರಮುಖ ಹೂಡಿಕೆದಾರರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಮತ್ತು ಸಂಸ್ಥೆಗೆ ಸಾಲ ನೀಡಿದ ಯುಎಸ್‌ ಸಂಸ್ಥೆಯೊಂದಿಗೆ ಕಾನೂನು ಸಮರ ನಡೆಸುತ್ತಿದ್ದಾರೆ. ಇನ್ನು “ಫೆಬ್ರವರಿಯ ವೇತನವನ್ನು ನೀಡಲು ಸಾಧ್ಯವಾಗುತ್ತಿಲ್ಲ, ತಡವಾಗಿ ಸಂಬಳ ನೀಡಲಾಗುವುದು” ಎಂದು ಕಳೆದ ತಿಂಗಳು ರವೀಂದ್ರನ್ ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ನಗದು ಕೊರತೆಯನ್ನು ಎದುರಿಸುತ್ತಿರುವ ಬೈಜೂಸ್, 1.2 ಬಿಲಿಯನ್ ಡಾಲರ್ ಸಾಲದ ಹೊರೆಯಲ್ಲಿ ಸಿಲುಕಿದೆ. ಈ ಹಿಂದೆ ಸುಮಾರು 20 ಬಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದ ಬೈಜೂಸ್‌ ಕಳೆದ ಒಂದು ವರ್ಷದಲ್ಲಿ ಶೇಕಡ 90ರಷ್ಟು ಮೌಲ್ಯವನ್ನು ಕಳೆದುಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X