ಕಲಬುರಗಿ | ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಪ್ರಶ್ನಿಸಿ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ ಕಲ್ಯಾಣ ಸಂಘ ಏರ್ಪಡಿಸಿದ್ದ ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಸಂವಿಧಾನದ ತತ್ವಗಳು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯವು ಕಲಬುರಗಿಗೆ ಬರಲು ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಅವರು ನಡೆಸಿದ ಹೋರಾಟ ಕಣ್ಣ ಮುಂದಿದೆ. ಆದರೆ ಇಲ್ಲಿನ ಪರಿಸ್ಥಿತಿ ಗಮನಿಸಿದರೆ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ.

Advertisements

ವಿಚಾರ ಸಂಕಿರಣ ಏರ್ಪಡಿಸಲು ವಿವಿಯ ಕುಲಸಚಿವರು ಷರತ್ತು ಹಾಕಿದ್ದರು. ಶೈಕ್ಷಣಿಕ ಸಮಗ್ರತೆಗೆ ಧಕ್ಕೆ ತರದಂತೆ ಕಾರ್ಯಕ್ರಮ ನಡೆಸಬೇಕೆನ್ನುವವರು, ಈ ಕಾರ್ಯಕ್ರಮದಲ್ಲಿ ಜನರಿಂದ ಆಯ್ಕೆಯಾದ ಈ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಭಾಗವಾಗಿರುವ ನಾನು ಭಾಗವಹಿಸುವ ಕಾರ್ಯಕ್ರಮಕ್ಕೆ ಇಷ್ಟೊಂದು ಷರತ್ತು ಹಾಗೂ ಪೊಲೀಸ್ ಭದ್ರತೆ ಹಾಕುವ ಅವಶ್ಯಕತೆ ಏನಿತ್ತು? ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ವಿ.ವಿ. ಕುಲಪತಿಗೆ ಅಥವಾ ರಿಜಿಸ್ಟ್ರಾರ್‌ಗೆ ಪತ್ರ ಬರೆಯಲು ತಿಳಿಸಿದರು ಎಂದರು.

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ನಾನು ನಿಮ್ಮೊಂದಿಗೆ ಇರುತ್ತೇನೆ. ನಾನು ವಿಶ್ವ ವಿದ್ಯಾಲಕ್ಕೆ ಬರದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X