ರಣಜಿ ಫೈನಲ್‌ | ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಮುಶೀರ್ ಖಾನ್

Date:

Advertisements

ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ವಿದರ್ಭ ವಿರುದ್ಧದ ರಣಜಿ ಫೈನಲ್‌ನಲ್ಲಿ ಮುಶೀರ್ ಖಾನ್ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.

19 ವರ್ಷ ಮತ್ತು 14 ದಿನಗಳ ವಯಸ್ಸಿನ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮುಂಬೈನ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಆಗಿದ್ದಾರೆ. ತೆಂಡೂಲ್ಕರ್ 1994-95ರಲ್ಲಿ ಪಂಜಾಬ್ ವಿರುದ್ಧ ತನ್ನ 21ನೇ ವಯಸ್ಸಿನಲ್ಲಿ ಬರೆದ ದಾಖಲೆಯನ್ನು ಈಗ ಮುಶೀರ್‌ ಮುರಿದಿದ್ದಾರೆ. 1994-95ರ ಫೈನಲ್‌ನಲ್ಲಿ ಸಚಿನ್ ಎರಡು ಶತಕಗಳನ್ನು (140 ಮತ್ತು 139) ಗಳಿಸಿದ್ದರಿಂದ ಮುಂಬೈ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರರಾಗಿರುವ ಮುಶೀರ್ ಖಾನ್ ತಮ್ಮ ಶತಕದೊಂದಿಗೆ ನಡೆಯುತ್ತಿರುವ ಫೈನಲ್‌ನಲ್ಲಿ ಮುಂಬೈ ತಂಡವನ್ನು ಬಲಿಷ್ಠ ಸ್ಥಾನದಲ್ಲಿ ನಿಲ್ಲಿಸಿದ್ದಾರೆ.

Advertisements

ಇನ್ನು ಸಾಲು ಸಾಲು ವೈಫಲ್ಯ ಕಾರಣ ಭಾರತ ಟೆಸ್ಟ್‌ ತಂಡದಲ್ಲಿ ತನ್ನ ಸ್ಥಾನವನ್ನು ಇತ್ತೀಚೆಗೆ ಕಳೆದುಕೊಂಡ ಸ್ಟಾರ್‌ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಬರೀ 7 ರನ್‌ ಗಳಿಸಿದ್ದ ಶ್ರೇಯಸ್‌ ಅಯ್ಯರ್‌ ಎರಡನೇ ಇನಿಂಗ್ಸ್‌ನಲ್ಲಿ 62 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಕಳೆದ 14 ತಿಂಗಳಲ್ಲಿ ಮೊದಲ 50ಕ್ಕೂ ಅಧಿಕ ಸ್ಕೋರ್ ಅನ್ನು ಶ್ರೇಯಸ್ ಅಯ್ಯರ್ ಪಡೆದಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ವಿದರ್ಭವನ್ನು ಕೇವಲ 105 ರನ್‌ಗಳಿಗೆ ಆಲೌಟ್ ಮಾಡುವ ಮೊದಲು ಮುಂಬೈ 224 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ 418 ಸ್ಟೋರ್ ಗಳಿಸಿದೆ. ಈ ವರದಿಯನ್ನು ಪ್ರಕಟಿಸುವ ಸಮಯದಲ್ಲಿ ವಿದರ್ಭ ಎರಡನೇ ಇನ್ನಿಂಗ್ಸ್‌ನಲ್ಲಿ 10/0 ಸ್ಕೋರ್ ಗಳಿಸಿದ್ದು, 538 ಟಾರ್ಗೆಟ್ ಆಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X