ಯುಪಿ | 2018ರ ಗುಂಪು ಹಲ್ಲೆ ಪ್ರಕರಣ: 10 ಜನರಿಗೆ ಜೀವಾವಧಿ ಶಿಕ್ಷೆ

Date:

Advertisements

ಉತ್ತರ ಪ್ರದೇಶದ ಹಾಪುರ್‌ನ ಸ್ಥಳೀಯ ನ್ಯಾಯಾಲಯವು 2018ರ ಗುಂಪು ಹತ್ಯೆ ಪ್ರಕರಣದಲ್ಲಿ ಎಲ್ಲ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ (ಪೋಕ್ಸೊ) ಶ್ವೇತಾ ದೀಕ್ಷಿತ್ ಅವರು ಪ್ರಕರಣದ ವಿಚಾರಣೆ ನಡೆಸಿದ್ದಾರೆ. ಗೋಹತ್ಯೆ ಎಂಬ ಸುಳ್ಳು ವದಂತಿಯ ಮೇಲೆ 45 ವರ್ಷದ ಖಾಸಿಂನನ್ನು ಹತ್ಯೆಗೈದು, ಸಮಯದೀನ್ (62) ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.

ಸರ್ಕಾರಿ ವಕೀಲ ವಿಜಯ್ ಚೌಹಾಣ್ ಅವರ ಪ್ರಕಾರ, ಧೌಲಾನಾದ ಬಜೈದಾ ಗ್ರಾಮದ ರಾಕೇಶ್, ಹರಿಓಮ್, ಯುಧಿಷ್ಠಿರ್, ರಿಂಕು, ಕರನ್‌ಪಾಲ್, ಮನೀಶ್, ಲಲಿತ್, ಸೋನು, ಕಪ್ತಾನ್ ಮತ್ತು ಮಂಗೇರಾಮ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ತಲಾ 58,000 ರೂ. ದಂಡವ ವಿಧಿಸಲಾಗಿದೆ.

Advertisements

ಸಂತ್ರಸ್ತ ಕುಟುಂಬದ ಪರವಾಗಿ ವಾದಿಸಿದ ವಕೀಲರು, “ಸಂತ್ರಸ್ತ ಕುಟುಂಬವು ಆರೋಪಿಗಳ ವಿರುದ್ಧ ಯಾವುದೇ ದ್ವೇಷ ಹೊಂದಿಲ್ಲ. ಅವರು ನ್ಯಾಯವನ್ನು ಕೋರುತ್ತಾರೆ. ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದು ಬೇಡ” ಎಂದು ನ್ಯಾಯಾಲಯವನ್ನು ಕೋರಿದ್ದರು.

2018ರ ಜೂನ್‌ನಲ್ಲಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಬಜೈದಾ ಗ್ರಾಮದ ನಿವಾಸಿ ಖಾಸಿಮ್ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು. ಅಲ್ಲದೆ, ಸಮಯದೀನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆಯನ್ನು ಬೈಕ್ ಅಪಘಾತವೆಂದು ತಿರುಚಿ ಪೊಲೀಸರು ಸುಳ್ಳು ಎಫ್‌ಐಆರ್ ದಾಖಲಿಸಿದ್ದರು. ಸಂತ್ರಸ್ತ ಸಮಯ್‌ದೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಳಿಕ, ಪ್ರಕರಣವನ್ನು ನ್ಯಾಯಯುತ ರೀತಿಯಲ್ಲಿ ತನಿಖೆ ನಡೆಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X