ಚುನಾವಣೆ 2023 | ಮೈತ್ರಿ ಸರ್ಕಾರ ಕೆಡವಿ, ಬಿಜೆಪಿ ಸೇರಿದ್ದ ಎಂಟಿಬಿ ಘೋಷಿತ ಆಸ್ತಿ ₹1,510 ಕೋಟಿ

Date:

Advertisements

2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಎಂಎಲ್‌ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿಯ ಪ್ರಮಾಣವನ್ನು ಘೋಷಿಸಿದ್ದಾರೆ. ಅವರ ಬಳಿ ₹1,510 ಕೋಟಿ ಮೌಲ್ಯದ ಆಸ್ತಿ ಇರುವುದಾಗಿ ಹೇಳಿಕೊಂಡಿದ್ದಾರೆ.

2019ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿ ಉಪಚುನಾವಣೆ ಎದುರಿಸಿದ್ದರು. ಉಪಚುನಾವಣೆ ವೇಳೆ, ಅವರು ತಮ್ಮ ಬಳಿ ₹1,015 ಕೋಟಿ ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿದ್ದರು. ಆ ಚುನಾವಣೆಯಲ್ಲಿ ಸೋಲುಂಡ ಅವರು, ಬಳಿಕ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ)ರಾದರು. ಅಲ್ಲದೆ, ಪೌರಾಡಳಿತ ಸಚಿವರೂ ಆದರು. ಇದೀಗ, ಅವರು ತಮ್ಮ ಆಸ್ತಿಯನ್ನು ಘೋಷಿಸಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆಸ್ತಿ ₹495 ಕೋಟಿಯಷ್ಟು ಹೆಚ್ಚಾಗಿದೆ.

ಪ್ರಸ್ತುತ ಎಂಟಿಬಿ ನಾಗರಾಜ್‌ ಬಳಿ ₹372 ಕೋಟಿ ಮತ್ತು ಅವರ ಪತ್ನಿ ಶಾಂತಕುಮಾರಿ ಬಳಿ ₹163 ಕೋಟಿದ ಚರಾಸ್ತಿ ಇದೆ. ನಾಗರಾಜ್‌ ಬಳಿ ₹792 ಕೋಟಿ ಮೌಲ್ಯದ ಸ್ಥಿರಾಸ್ತಿ ಇದ್ದರೆ, ಅವರ ಪತ್ನಿ ಬಳಿ ₹274 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ.

Advertisements

ಎಂಟಿಬಿ ನಾಗರಾಜ್‌ ಬಳಿ ₹64 ಲಕ್ಷ ಮತ್ತು ಪತ್ನಿ ಬಳಿ ₹34 ಲಕ್ಷ ನಗದು ಹಣವಿದೆ. ಜೊತೆಗೆ, ₹1.1 ಕೋಟಿ ಮೌಲ್ಯದ 214 ಕೆ.ಜಿ ಬೆಳ್ಳಿ, ₹98 ಲಕ್ಷ ಮೌಲ್ಯದ ವಜ್ರ, ₹38 ಲಕ್ಷ ಮೌಲ್ಯದ ಚಿನ್ನ ಸೇರಿದಂತೆ ಒಟ್ಟು ₹2.41 ಕೋಟಿ ಮೌಲ್ಯದ ಆಭರಣಗಳನ್ನು ಎಂಟಿಬಿ ಹೊಂದಿದ್ದಾರೆ. ಅವರ ಪತ್ನಿ ಬಳಿ ಒಟ್ಟು ₹ 1.64 ಕೋಟಿ ಮೌಲ್ಯದ ಆಭರಣಗಳಿವೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ

ಎಂಟಿಬಿ ನಾಗರಾಜ್‌ ಬಳಿ ₹1.72 ಕೋಟಿ ಮೌಲ್ಯದ ಕಾರುಗಳಿವೆ. ಅವರ ಹೆಸರಿನಲ್ಲಿ ಐ10, ಬೊಲೆರೊ, ಲ್ಯಾಂಡ್ ರೋವರ್ ಡಿವೆಂಡರ್ ವಾಹನಗಳಿದ್ದರೆ, ಅವರ ಪತ್ನಿ ಹೆಸರಲ್ಲಿ ಪೋರ್ಶ್ ಮತ್ತು ಇನೋವಾ ಕ್ರಿಸ್ಟಾ ಕಾರುಗಳಿವೆ. ಪತ್ನಿ ಹೆಸರಿನಲ್ಲಿರುವ ಎರಡು ಕಾರುಗಳ ಮೌಲ್ಯ ₹1.33 ಕೋಟಿ ಮೌಲ್ಯವನ್ನು ಹೊಂದಿವೆ.

ಎಂಟಿಬಿ ನಾಗರಾಜ್‌ ₹71 ಕೋಟಿ ಸಾಲ ಮಾಡಿಕೊಂಡಿದ್ದು, ಅವರ ಪತ್ನಿ ₹27 ಕೋಟಿ ಸಾಲ ಮಾಡಿರುವುದಾಗಿ ತಮ್ಮ ಅಫಿಡವಿಟ್‌ನಲ್ಲಿ ಎಂಟಿಬಿ ನಾಗರಾಜ್ ಘೋಷಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X