ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

Date:

Advertisements

ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಅದಕ್ಕೆ ತಕ್ಕಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿರುವುದು ಅಚ್ಚರಿ ಮೂಡಿಸಿದ್ದರೂ ಸಂತಸಕ್ಕೆ ಕಾರಣವಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು, ಕಾಕೋಟಪರಂಬುವಿನಲ್ಲಿ ಬುಧವಾರ ಕೆಲ ಸಮಯ ಮಳೆಯಾಗಿದ್ದು, ಕಾದಿದ್ದ ಭೂಮಿಗೆ ತಂಪೆರದಿದೆ.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದ್ದು, ಮಾರ್ಚ್ 20ರ ಬಳಿಕ ಕೊಡಗು, ಪಶ್ಚಿಮ ಘಟ್ಟಗಳ ಭಾಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಅಂದುಕೊಂಡಿದ್ದ ಸಮಯಕ್ಕೂ ಮುನ್ನವೇ ಕೊಡಗು ಜಿಲ್ಲೆಯ ಕಿಗ್ಗಾಲುವಿನಲ್ಲಿ ಮಳೆಯಾಗಿದೆ.

Advertisements

“ಎಲ್‌ ನಿನೋ ಪ್ರಭಾವ ಕಡಿಮೆಯಾಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ತಾಪಮಾನ ಸಹಜ ಸ್ಥಿತಿಗೆ ಮರಳಲಿದೆ. ಈ ಬಾರಿ ರಾಜ್ಯದಲ್ಲಿ ಕೂಡ ಉತ್ತಮ ಮುಂಗಾರು ಮಳೆಯ ನಿರೀಕ್ಷೆ ಇದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ-ಜೂನ್ ವೇಳೆಗೆ ರಾಜ್ಯದಲ್ಲಿ ಉತ್ತಮ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ” ಎಂದು ನಿರೀಕ್ಷಿಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟರೆ ಭೀಕರ ಬರಗಾಲ ಎದುರಾಗಲಿದೆ. ಆದರೆ ಹವಾಮಾನ ತಜ್ಞರು ಉತ್ತಮ ಮಳೆಯಾಗುವ ಮುನ್ಸೂಚನೆ ಕೊಟ್ಟಿರುವುದು ಸದ್ಯ ಸಮಾಧಾನ ತರಿಸಿದೆ. ಆದರೆ ಮಳೆಗಾಲ ಆರಂಭಕ್ಕೆ ಇನ್ನು ಮೂರು ತಿಂಗಳು ಸಮಯ ಇದ್ದು ಅದುವರೆಗೂ ಸುಡು ಬಿಸಿಲಿನ ನಡುವೆ, ನೀರಿನ ಕೊರತೆ ನಡುವೆ ದಿನ ಕಳೆಯುವುದು ಸವಾಲಾಗಿದೆ.

ಎಲ್‌ ನಿನೋ ಕಾರಣದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಕಳೆದ ವರ್ಷ ಮಳೆ ಸಂಪೂರ್ಣವಾಗಿ ಕೈಕೊಟ್ಟಿತ್ತು. ಪ್ರಮುಖ ಜಲಾಶಯಗಳು ಅರ್ಧ ಕೂಡ ತುಂಬದೇ ಇರುವುದು ಕೃಷಿ ಚಟುವಟಿಕೆ ಮೇಲೆಯೂ ಪರಿಣಾಮ ಬೀರಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X