ಚಿಕ್ಕಬಳ್ಳಾಪುರ | ಒಕ್ಕಲಿಗ ಸಮುದಾಯದ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಿ: ಕೋನಪ್ಪ ರೆಡ್ಡಿ ಒತ್ತಾಯ

Date:

Advertisements

ಯಾವ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುತ್ತದೆಯೋ, ಅಂತಹ ಪಕ್ಷಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪ ರೆಡ್ಡಿ ಕರೆ ನೀಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಪ್ರಸ್ತುತ ಬಿಜೆಪಿಯು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕ್ರಿಯಾಶೀಲ ನಾಯಕ ಪ್ರತಾಪ್ ಸಿಂಹ ಸೇರಿದಂತೆ ಮುಂತಾದವರಿಗೆ ಟಿಕೆಟ್ ಕೊಡದೆ ಸಮುದಾಯವನ್ನು ಕಡೆಗಣಿಸಿದೆ. ಸ್ಥಳೀಯ ಒಕ್ಕಲಿಗ ನಾಯಕರಿಗೆ ಆದ್ಯತೆ ಕೊಟ್ಟಿಲ್ಲ. ಹಾಗಾಗಿ ನಮಗೆ ಎಲ್ಲಿ, ಯಾವ ಪಕ್ಷ, ಯಾವ ಸರ್ಕಾರ ಆದ್ಯತೆ ನೀಡುತ್ತದೆಯೋ ಅಂತಹ ಪಕ್ಷಕ್ಕೆ ನಾವು ಬೆಂಬಲ ಕೊಡುತ್ತೇವೆ” ಎಂದು ಪುನರು‌ಚ್ಛರಿಸಿದರು.

“ಸಮುದಾಯ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ನಮ್ಮ ಸಮುದಾಯವನ್ನು ನಿರ್ಲಕ್ಷಿಸುವ ಪಕ್ಷವನ್ನು ನಮ್ಮ ಸಮುದಾಯ ನಿರ್ಲಕ್ಷ್ಯ ಮಾಡುತ್ತದೆ” ಎಂದು ಹೇಳಿದರು.

Advertisements

“ರಾಜ್ಯದಲ್ಲಿ ಶೇ.16ರಷ್ಟು ಮಂದಿ ಒಕ್ಕಲಿಗ ಸಮುದಾಯದವರಿದ್ದಾರೆ. ನಮಗೆ ಪ್ರಾತಿನಿಧ್ಯ ಕೊಡಬೇಕು. ಕೊಡದಿದ್ದಲ್ಲಿ ನಮಗೆ ಆಧ್ಯತೆ ನೀಡುವ ಕಡೆ ಸಮುದಾಯ ಹೋಗಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 7.45 ಲಕ್ಷ ಒಕ್ಕಲಿಗ ಮತದಾರರಿದ್ದಾರೆ. ಬಿಜೆಪಿಯಲ್ಲಿ ಉಳಿದಿರುವುದು ಚಿಕ್ಕಬಳ್ಳಾಪುರ ಕ್ಷೇತ್ರ ಒಂದೇ. ಆದ್ದರಿಂದ ಈ ಬಾರಿ ಒಕ್ಕಲಿಗ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದರು.

“ಸರ್ಕಾರದ ಜಾತಿಗಣತಿ ನಿರ್ಧಾರ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದರಿಂದ ನಮ್ಮ ಸಮುದಾಯಕ್ಕೆ ಸರ್ಕಾರಿ ಕೆಲಸ ಗಗನಕುಸುಮ ಆಗುತ್ತದೆ. ಇಷ್ಟು ದಿನ ಸ್ವತಃ ಡಿಸಿಎಂ ಡಿಕೆಶಿ ಅವರೇ ಜಾತಿಗಣತಿಯನ್ನು ಮಾಡದಂತೆ ತಡೆದಿದ್ದಾರೆ. ಜಾತಿ ಗಣತಿಗೆ ನಮ್ಮ ಸಮುದಾಯದ ಸಂಪೂರ್ಣ ವಿರೋಧವಿದೆ” ಎಂದು ಸರ್ಕಾರದ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ಸುದ್ದಿಗೋಷ್ಟಿಯಲ್ಲಿ ಶಿವಾರೆಡ್ಡಿ, ನಾಗರಾಜ ರೆಡ್ಡಿ, ಕೃಷ್ಣ ರಾಜ ರೆಡ್ಡಿ, ಒಕ್ಕಲಿಗ ಸಂಘದ ಮತ್ತೊಬ್ಬ ನಿರ್ದೇಶಕ, ಒಕ್ಕಲಿಗ ಸಮುದಾಯ ಭವನದ ಕಾರ್ಯದರ್ಶಿ ಬೈರಾರೆಡ್ಡಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X