ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

Date:

Advertisements

ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು ಹಳ್ಳಿಗಳಲ್ಲಿ ಸಂಗ್ರಹಿಸಿದ್ದ ನಾಣ್ಯಗಳನ್ನು ನೀಡಿ, ಠೇವಣಿ ಭರಿಸಿದ್ದಾರೆ.

ಯಾದಗಿರಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಯಂಕಪ್ಪ‌, ಒಂದು ರೂಪಾಯಿ ನಾಣ್ಯಗಳನ್ನು ಠೇವಣಿಯಾಗಿ ಚುನಾವಣೆ ಅಧಿಕಾರಿಗಳಿಗೆ ಸಲ್ಲಿಸಿದರು. ಮೂವರು ಸಿಬ್ಬಂದಿ ಸುಮಾರು 2 ಗಂಟೆ ಕಾಲ ನಾಣ್ಯಗಳನ್ನು ಎಣಿಕೆ ಮಾಡಿದರು.

ಒಟ್ಟು 10 ಸಾವಿರ ರೂಪಾಯಿ ಹಣ ಒಂದು ರೂಪಾಯಿ‌ ನಾಣ್ಯಗಳಲ್ಲಿ ಸಂಗ್ರಹವಾಗಿತ್ತು. ““ಒಂದು ರೂಪಾಯಿಯಲ್ಲಿ ಒಂದು ಮತದಾನದಿಂದ ಒಂದು ದಿನ. “ನನಗೆ ನಿಮ್ಮ ಮತದಾನ ಕೊಡಿ, ನಾನು ನಿಮಗೆ ಬಡತನದಿಂದ ಸ್ವಾತಂತ್ರ್ಯ ಕೊಡಿಸುವೆ” ಎನ್ನುವ ಘೋಷಗಳೊಂದಿಗೆ ರಥಯಾತ್ರೆ ಮೂಲಕ ಗ್ರಾಮಗಳಲ್ಲಿ ಯಂಕಪ್ಪ ಸಂಚರಿಸಿ, ನಾಣ್ಯಗಳನ್ನು ಸಂಗ್ರಹಿಸಿದ್ದರು.

Advertisements

ಮೈಸೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ ವಿದ್ಯಾರ್ಥಿಯಾಗಿರುವ ಯಂಕಪ್ಪ, 23ನೇ ವಯಸ್ಸಿನಲ್ಲಿ ಮನೆ ತೊರೆದು ಮತದಾನ ಜಾಗೃತಿಗಾಗಿ ಗ್ರಾಮಗಳ‌ಲ್ಲಿ ಸಂಚಾರ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

“ಒಬ್ಬರಿಂದ ಕೇವಲ ಒಂದು ರೂಪಾಯಿ ನಾಣ್ಯವನ್ನಷ್ಟೆ ಸಂಗ್ರಹ ಮಾಡಿದ್ದಾರೆ. ₹10 ಮುಖಬೆಲೆಯ ನೋಟು ಕೊಟ್ಟರೂ ಸ್ವೀಕರಿಸಿಲ್ಲ. ಯಂಕಪ್ಪ ಬಡತನದಲ್ಲಿ ಬೆಳೆದಿದ್ದರಿಂದ ಬಡತನವನ್ನು ಅಳಿಸಲು ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಾರಿ ಅಲ್ಲದಿದ್ದರೂ ಮುಂದಿನ ಬಾರಿಯಾದರೂ ಚುನಾವಣೆಯಲ್ಲಿ ಗೆಲ್ಲಲಿ ಎನ್ನುವುದು ನಮ್ಮ ಆಸೆಯಾಗಿದೆ” ಎಂದು ರಾಮಸಮುದ್ರ ಗ್ರಾಮದ ನಿವಾಸಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X