ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

Date:

Advertisements

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಪದೇಪದೆ ಮಹಿಳೆಯ ಅಂಗಾಂಗಗಳು ಪತ್ತೆಯಾಗುತ್ತಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇಪ್ಪತ್ತು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು. ಇಂದು (ಮಾರ್ಚ್‌ 15) ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ. 30 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಎರಡು ಕಾಲುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇನ್ನು ದೇಹದ ಉಳಿದ ಭಾಗದ ಶೋಧ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಸಮೀಪದಲ್ಲಿರುವ ಮುನಿ ಮಾರಯ್ಯನ ದೊಡ್ಡಿ ಅರಣ್ಯದಂಚಿನಲ್ಲಿ ಅಪರಿಚಿತ ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ.

Advertisements

ಸ್ಥಳೀಯರು ಮಾರ್ಚ್‌ 15ರಂದು ಬೆಳಗಿನ ಜಾವ ವಾಕಿಂಗ್‌ಗೆ ತೆರಳಿದ್ದಾಗ ಮೃತದೇಹದ ಕಾಲುಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಆರಂಭ

ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯ ತಂಡ ಮತ್ತು ಶ್ವಾನದಳ ಪರಿಶೀಲನೆ ನಡೆಸಿದ್ದಾರೆ.

15 ರಿಂದ 20 ದಿನಗಳ ಹಿಂದೆ 30 ವರ್ಷದ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಮಹಿಳೆಯ ಅಂಗಾಂಗಗಳನ್ನು ಕತ್ತರಿಸಿ ಎಸೆದು ಹೋಗಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X