ಚುನಾವಣೆ 2023 | ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಘೋಷಿತ ಆಸ್ತಿ ಮೌಲ್ಯ ₹1,414 ಕೋಟಿ

Date:

Advertisements

ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಅವರು ಕುಟುಂಬವು ಒಟ್ಟು ₹1,414 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದೆ ಎಂದು ಹೇಳಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಅವರ ಕುಟುಂಬದ ಆಸ್ತಿ ಮೌಲ್ಯ ₹1,162 ಕೋಟಿಗಳಷ್ಟು ಏರಿಕೆಯಾಗಿದೆ.

ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿಯೇ ಒಟ್ಟು ₹1,214 ಕೋಟಿ ಮೌಲ್ಯದ ಆಸ್ತಿ ಇದೆ. ಅವರ ಪತ್ನಿ ಉಷಾ ಅವರ ಹೆಸರಿನಲ್ಲಿ ₹153.30 ಕೋಟಿ ಮೌಲ್ಯದ ಆಸ್ತಿ ಇದೆ. ಜೊತೆಗೆ, ಅವರ ಮಗ ಆಕಾಶ್ ಹೆಸರಿನಲ್ಲಿ ₹66 ಕೋಟಿ ಮೌಲ್ಯದ ಆಸ್ತಿ ಇದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಬಳಿ ₹244.93 ಕೋಟಿ ಮತ್ತು ಪತ್ನಿ ಬಳಿ ₹20.30 ಕೋಟಿ ಹಾಗೂ ಪುತ್ರನ ಬಳಿ ₹12.99 ಕೋಟಿ ಮೌಲ್ಯದ ಚರಾಸ್ತಿ ಇದೆ. ಅಲ್ಲದೆ, ಡಿಕೆ ಶಿವಕುಮಾರ್ ಬಳಿ ₹970 ಕೋಟಿ, ಪತ್ನಿ ಬಳಿ ₹113.38 ಕೋಟಿ ಹಾಗೂ ಪುತ್ರನ ಬಳಿ ₹54.33 ಕೋಟಿ ಸ್ಥಿರಾಸ್ತಿ ಇದೆ ಎಂದು ಹೇಳಿದ್ದಾರೆ.

Advertisements

ಡಿಕೆ ಶಿವಕುಮಾರ್ 2.184 ಕೆ.ಜಿ ಚಿನ್ನ, 12.600 ಕೆ.ಜಿ ಬೆಳ್ಳಿ, 1.066 ಕೆ.ಜಿ ಚಿನ್ನಾಭರಣ, 324 ಗ್ರಾಂ ಡೈಮಂಡ್, 111 ಗ್ರಾಂ ರೂಬಿಗಳು, 195 ಗ್ರಾಂ ವಜ್ರ ಹೊಂದಿದ್ದಾರೆ. ಅವರ ಪತ್ನಿ ಬಳಿ 2.600 ಕೆ.ಜಿ ಚಿನ್ನ, 20 ಕೆ.ಜಿ ಬೆಳ್ಳಿ ಇದ್ದರೆ, ಮಗನ ಹೆಸರಿನಲ್ಲಿ 675 ಗ್ರಾಂ ಚಿನ್ನವಿದೆ. ಮಗಳ ಹೆಸರಿನಲ್ಲಿ 675 ಗ್ರಾಂ ಚಿನ್ನವಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ, ತಮ್ಮ ಬಳಿ ₹23 ಲಕ್ಷ ಮೌಲ್ಯದ ಯೂಬ್ಲೇಟ್ ವಾಚ್, ₹9 ಲಕ್ಷ ಮೌಲ್ಯದ ರೋಲೆಕ್ಸ್ ವಾಚ್ ಇರುವುದಾಗಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಬಿಎಸ್‌ವೈ ಪುತ್ರ ವಿಜಯೇಂದ್ರ ಘೋಷಿತ ಆಸ್ತಿ ಮೌಲ್ಯ ₹126 ಕೋಟಿ

ಕೃಷಿ, ಬಾಡಿಗೆ ಮತ್ತು ವಿವಿಧ ಕಂಪನಿಗಳಲ್ಲಿರುವ ಶೇರುಗಳು ಹಾಗೂ ಉದ್ದಿಮೆಗಳು ತಮ್ಮ ಆದಾಯದ ಮೂಲಗಳೆಂದು ಡಿ.ಕೆ ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಅಲ್ಲದೆ, ತಮ್ಮ ಹೆಸರಿನಲ್ಲಿ ₹226 ಕೋಟಿ ರೂಪಾಯಿ ಸಾಲ, ಪತ್ನಿ ಹೆಸರಿನಲ್ಲಿ ₹34 ಕೋಟಿ ಸಾಲವಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ತಮ್ಮ ವಿರುದ್ಧ ಐಟಿ, ಲೋಕಾಯುಕ್ತ, ಜಾರಿ ನಿರ್ದೇಶನಾಯದಲ್ಲಿ ದಾಖಲಾಗಿರುವ ಪ್ರಕರಣಗಳು ಮತ್ತು ಕೊರೊನಾ ನಿಯಮಾವಳಿಗಳ ಉಲ್ಲಂಘನೆ ಸೇರಿದಂತೆ ಒಟ್ಟು 19 ಪ್ರಕರಣಗಳಿವೆ ಎಂದು ಡಿ.ಕೆ ಶಿವಕುಮಾರ್‌ ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X