ಚುನಾವಣಾ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆಯಾಗಲಿ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

Date:

Advertisements

ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಚುನಾವಣಾ ಬಾಂಡ್‌ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು ಹೆದರಿಸಿ ಮೋದಿ ಸರ್ಕಾರ ಹಣ ಪಡೆದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ಸತ್ಯ ಹರಿಶ್ಚಂದ್ರ ತರ ಮಾತನಾಡುತ್ತಿದ್ದರು. ‘ನಾ ಖಾವುಂಗಾ, ನಾ ಖಾನೆದೂಂಗಾ’ ಎನ್ನುತ್ತಿದ್ದ ಮೋದಿ ಈ ಹಣದ ಬಗ್ಗೆ ದೇಶಕ್ಕೆ ಉತ್ತರಿಸಬೇಕು” ಎಂದರು.

“ಸದ್ಯದ ಮಾಹಿತಿ ಪ್ರಕಾರ ಬಿಜೆಪಿಗೆ ಶೇ.50ರಷ್ಟು ದೇಣಿಗೆ ಸಂದಾಯ ಆಗಿದೆ. ಕಾಂಗ್ರೆ‌ಸ್‌ಗೆ ಶೇ.11 ರಷ್ಟು ಚುನಾವಣೆ ಬಾಂಡ್‌ ಮೂಲಕ ಹಣ ಸಂದಾಯವಾಗಿದೆ. ಇತ್ತೀಚೆಗೆ ನಮ್ಮ ಪಕ್ಷದ ಅಕೌಂಟ್‌ಗಳನ್ನು ಸೀಸ್‌ ಮಾಡಲಾಗಿದೆ. ಹೀಗಾದ್ರೆ ನಾವು ಚುನಾವಣೆಗೆ ಹೋಗುವುದು ಹೇಗೆ” ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

“6 ಸಾವಿರ ಕೋಟಿ ಬಿಜೆಪಿ ಮಡಿಲು ಸೇರಿದೆ. ವಿರೋಧ ಪಕ್ಷಗಳ ಬ್ಯಾಂಕ್‌ ಅಕೌಂಟ್‌ ಸೀಸ್‌ ಮಾಡಿದ್ರೆ ನಾವು ಹೇಗೆ ಚುನಾವಣಾ ಖರ್ಚುಗಳನ್ನು ಮಾಡಬೇಕು? ಮೋದಿ ಉದ್ದೇಶ ಸ್ಪಷ್ಟವಾಗಿದೆ, ವಿರೋಧ ಪಕ್ಷಳಿಗೆ ಹಣ ಸಿಗಬಾರದು ಎಂಬುದು. ಹೀಗಾಗಿಯೇ ನಮ್ಮ ಅಕೌಂಟ್‌ಗಳನ್ನು ಬ್ಲಾಕ್‌ ಮಾಡಲಾಗಿದೆ. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದರು.

“ಕಾಂಗ್ರೆಸ್‌ ಪಕ್ಷ ಚುನಾವಣೆಯನ್ನೇ ಎದುರಿಸಬಾರದು ಎಂಬ ಷಡ್ಯಂತ್ರವನ್ನು ಬಿಜೆಪಿ ಹೂಡಿದೆ. ಈಗಲಾದರೂ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗವಾಗಿದೆ. ದೇಶದ ಮುಂದೆ ಇದರ ಸತ್ಯಾಸತ್ಯತೆ ತಿಳಿಯಬೇಕು. ಈ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು” ಎಂದು ಖರ್ಗೆ ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X