ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

Date:

Advertisements

₹51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ, ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀಗ ಜಡಿದಿದೆ.

ಬಾಕಿ ಉಳಿಸಿಕೊಂಡಿದ್ದ ತೆರಿಗೆ ಹಣವನ್ನು ಒಂದು ಬಾರಿ ಪೂರ್ತಿ ಪಾವತಿ ಮಾಡುವಂತೆ ಮಂತ್ರಿಮಾಲ್‌ಗೆ ಬಿಬಿಎಂಪಿ ತಾಕೀತು ಮಾಡಿತ್ತು. ಅಲ್ಲದೇ, ಸಮಯಾವಕಾಶ ಕೂಡ ನೀಡಿತ್ತು. ಆದರೆ, ಈ ಮದ್ಯೆ ಮತ್ತೆ ಮಾಲ್‌ ₹32 ಕೋಟಿ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ, ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ.

ಶನಿವಾರ ವಾರಾಂತ್ಯದ ದಿನವಾಗಿರುವುದರಿಂದ ಮಂತ್ರಿ ಮಾಲ್‌ ವಹಿವಾಟು ಹೆಚ್ಚಾಗಿರುತ್ತದೆ. ಆದರೆ, ವಾರಾಂತ್ಯದ ದಿನವೇ ಮಾಲ್‌ನ ಮುಖ್ಯ ದ್ವಾರಗಳಿಗೆ ಬೀಗ ಹಾಕುವ ಮೂಲಕ ಬಿಬಿಎಂಪಿ ಮಂತ್ರಿ ಮಾಲ್‌ಗೆ ಬಿಸಿ ಮುಟ್ಟಿಸಿದೆ.

Advertisements

ಈ ಹಿಂದೆಯೂ ಮಂತ್ರಿ ಮಾಲ್‌ ಹಲವು ಬಾರಿ ತೆರಿಗೆ ಬಾಕಿ ಉಳಿಸಕೊಂಡು ನಿರ್ಬಂಧಕ್ಕೊಳಗಾಗಿತ್ತು. ಮಾರ್ಚ್‌ 16ರ ಮುಂಜಾನೆಯೇ ಮಾಲ್​ಗೆ ಬೀಗ ಹಾಕಲಾಗಿದ್ದು, ಲೈಸೆನ್ಸ್​ ರದ್ದು​​​ ಮಾಡಲಾಗಿದೆ.

ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರಿ ಮಾಲ್‌ಗೆ ಬೀಗ ಹಾಕಲಾಗಿತ್ತು. ಇದೀಗ, ಮತ್ತೆ ಶನಿವಾರ ಮುಂಜಾನೆ ಬಿಬಿಎಂಪಿ ಅಧಿಕಾರಿಗಳು, ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ್ದಾರೆ. ಜತೆಗೆ, ನೋಟಿಸ್ ಕೂಡ ಅಂಟಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನವ ಕಳ್ಳಸಾಗಣೆ ಆರೋಪ; ಎನ್‌ಸಿಪಿಸಿಆರ್‌ ದಾಳಿ ವೇಳೆ 20 ಬಾಲಕಿಯರು ಪತ್ತೆ

ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 6ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X