ಬೆಂಗಳೂರು | ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ಓಪನ್; ಬೈಕ್ ಸವಾರ ಸಾವು

Date:

Advertisements

ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಕಾರ್ ಬಾಗಿಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ತಿಲಕನಗರದಲ್ಲಿ ನಡೆದಿದೆ.

ನಿಮ್ಹಾನ್ಸ್‌ನ ಡಿ ಗ್ರೂಪ್ ನೌಕರ ವೆಂಕಟೇಶ್ (53) ಮೃತರು. ಬೆಂಗಳೂರಿನ ತಿಲಕ್‌ನಗರದ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮೃತ ವೆಂಕಟೇಶ್ ಅವರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತರಳುತ್ತಿದ್ದರು. ಈ ವೇಳೆ, ರಸ್ತೆ ಬದಿ ನಿಂತಿದ್ದ ಕಾರಿನೊಳಗಿದ್ದವರು ದಿಢೀರ್ ಬಾಗಿಲು ತೆರೆದಿದ್ದಾರೆ.

Advertisements

ಇದರಿಂದ ಕಾರಿನ ಬಾಗಿಲು ವೆಂಕಟೇಶ್ ಅವರ ತಲೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಮೃತಪಟ್ಟಿದ್ದಾರೆ.

ಈ ಕುರಿತು ಮೈಕೊಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

ನಮ್ಮ ಮೆಟ್ರೋ | ಮಹಿಳಾ ಸಿಬ್ಬಂದಿಗೆ ಕಿರುಕುಳ : ನಿಲ್ದಾಣದ ಅಧಿಕಾರಿ ವಿರುದ್ದ ದೂರು ದಾಖಲು

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ, ಮಹಿಳಾ ಭದ್ರತಾ ಸಿಬ್ಬಂದಿ ಮೆಟ್ರೋ ನಿಲ್ದಾಣದ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅಧಿಕಾರಿ ಗಜೇಂದ್ರ ಪಿ. ಮಹಿಳಾ ಸಿಬ್ಬಂದಿಗೆ ಅಶ್ಲೀಲ ಪದಬಳಕೆ, ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಸಹಕರಿಸದಿದ್ದರೆ ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳಾ ಭದ್ರತಾ ಸಿಬ್ಬಂದಿ ಆರೋಪಿಸಿದ್ದಾರೆ.

ಮಹಿಳಾ ಭದ್ರತಾ ಸಿಬ್ಬಂದಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಮಹಿಳಾ ಭದ್ರತಾ ಸಿಬ್ಬಂದಿ ದೂರಿನ ಮೇರೆಗೆ ಮೆಟ್ರೋ ಅಧಿಕಾರಿ ಗಜೇಂದ್ರ ಪಿ. ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X