ಈಡೇರದ ಆಸೆಗಳಿಗೆ ನಮ್ಮನ್ನು ದೂಷಿಸುವುದು ಸರಿಯಲ್ಲ; ಇವಿಎಂ ಕುರಿತ ಪ್ರಶ್ನೆಗೆ ಚುನಾವಣಾ ಆಯುಕ್ತರ ಉತ್ತರ

Date:

Advertisements

ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಬರಲಿದೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಇವಿಎಂಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿದ್ದು, ಪ್ರಶ್ನೆಗೆ ಕವಿತೆಯ ಮೂಲಕ ರಾಜೀವ್ ಉತ್ತರಿಸಿದ್ದಾರೆ.

“ಇವಿಎಂಗಳನ್ನು ಕೆಲವು ಪಕ್ಷಗಳು ದೂಷಿಸುತ್ತವೆ. ಆದರೆ, ಚುನಾವಣಾ ಫಲಿತಾಂಶಗಳು ಅವರ ಪರವಾಗಿ ಬಂದಾಗ, ತಮ್ಮ ಆರೋಪಗಳನ್ನು ಹಿಂತೆಗೆದುಕೊಂಡು, ಅದೇ ಇವಿಎಂಗಳಿಗೆ ಅಂಟಿಕೊಳ್ಳುತ್ತಾರೆ. ಇವಿಎಂ 100 ಶೇ. ಸುರಕ್ಷಿತವಿದೆ” ಎಂದು ಹೇಳುವ ಮೂಲಕ ಇವಿಎಂಗಳನ್ನು ದೂಷಿಸುವವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

ಇವಿಎಂ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಬರಲಿದೆ ಎಂಬುದು ನನಗೆ ಚೆನ್ನಾಗಿ ಅರಿವಿತ್ತು. ಹಾಗಾಗಿ, ನಿನ್ನೆ ರಾತ್ರಿ ನಾನೇ ಖುದ್ದಾಗಿ ಕವಿತೆಯೊಂದನ್ನು ಬರೆದಿದ್ದಾಗಿ ಹೇಳುತ್ತಾ, ಹಿಂದಿಯಲ್ಲಿ ಕವಿತೆ ಓದಿದ್ದು, ಇದು ಇವಿಎಂ ಹೀಗೆ ಹೇಳುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ನಡೆಯಲಿದೆ, ಕರ್ನಾಟಕದಲ್ಲಿ 2 ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ, ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X