- ಹೆಚ್ಚಿನ ಪ್ರಮಾಣದ ಟ್ಯಾಂಕ್ಗಳನ್ನು ಅಳವಡಿಸಲು ಸೂಚನೆ
- ಜನಸಾಂದ್ರತೆ ಆಧಾರದ ಮೇಲೆ ನೀರು ಸರಬರಾಜು ಮಾಡಿ
ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇರುವಂತಹ ಬಂಡೆಪಾಳ್ಯ ಗ್ರಾಮಕ್ಕೆ ಮಾರ್ಚ್ 16ರಂದು ಭೇಟಿ ನೀಡಿ, ಉಚಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.
ಗ್ರಾಮಸ್ಥರೊಂದಿಗೆ ಮಾತನಾಡಿದ ಅಧ್ಯಕ್ಷರು ನೀರಿನ ಸರಬರಾಜು ನೀರಿನ ಲಭ್ಯತೆ ನೀರಿನ ಗುಣಮಟ್ಟ ಎಲ್ಲದರ ಬಗ್ಗೆ ಮಹಿಳೆಯರಿಂದ ಮಾಹಿತಿ ಪಡೆದುಕೊಂಡರು.
ಟ್ಯಾಂಕರ್ಗಳ ಮೇಲೆ ಸ್ಟಿಕರ್ ಅಂಟಿಸದ ಅಧಿಕಾರಿಗಳ ಮೇಲೆ ಗರಂ
ಬಂಡಿಪಾಳ್ಯದಲ್ಲಿ ನೀರಿನ ವಿತರಣೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಉಚಿತ ಟ್ಯಾಂಕರ್ ಮೇಲೆ ಸ್ಟಿಕ್ಕರ್ ಅಂಟಿಸದೆ ಇರುವಂತಹ ಅಧಿಕಾರಿಗಳ ಮೇಲೆ ಜಲಮಂಡಳಿಯ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಅವರು ಗರಂ ಆದರು.
ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುತ್ತಿರುವಂತಹ ಟ್ಯಾಂಕರ್ಗಳ ಮೇಲೆ ಉಚಿತ ಸ್ಟಿಕ್ಕರ್ ಅನ್ನು ಅಂಟಿಸುವುದು ಕಡ್ಡಾಯ. ಈ ಬಗ್ಗೆ ಅಧಿಕಾರಿಗಳಿಗೆ ಹಲವಾರು ಬಾರಿ ಸೂಚನೆ ನೀಡಲಾಗಿದೆ. ಆ ನೀರಿನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಉಚಿತ ನೀರಿನ ಟ್ಯಾಂಕರ್ಗಳ ಮೇಲೆ ಸ್ಟಿಕರ್ಗಳನ್ನ ಅಳವಡಿಸಿರುವುದನ್ನ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ
ಹೆಚ್ಚಿನ ಪ್ರಮಾಣದ ಟ್ಯಾಂಕ್ಗಳನ್ನು ಅಳವಡಿಸಲು ಸೂಚನೆ
ನೀರಿನ ಲಭ್ಯತೆ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಟ್ಯಾಂಕ್ಗಳನ್ನ ಅಳವಡಿಸುವುದು ಸೂಕ್ತ. ಬಂಡಿಪಾಳ್ಯದ ಗ್ರಾಮಸ್ಥರೊಂದಿಗೆ ಮಾತನಾಡಿದ ಜಲ ಮಂಡಳಿ ಅಧ್ಯಕ್ಷರು ನೀರಿನ ಪ್ರಮಾಣ ಹಾಗೂ ಲಭ್ಯತೆ ಬಗ್ಗೆ ಮಾಹಿತಿ ಪಡೆದರು.
ಕೆಲವು ಮಹಿಳೆಯರು ಇನ್ನಷ್ಟು ನೀರಿನ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರು ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕ್ಗಳನ್ನು ಅಳವಡಿಸುವಂತೆ ಹಾಗೂ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಅವುಗಳನ್ನ ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.