ಬೀದರ್‌ | ಕಳೆದ ವರ್ಷ ಜಿಲ್ಲೆಯಲ್ಲಿ 1097 ರಸ್ತೆ ಅಪಘಾತ; ಸಾವಿನ ಹಾದಿಗೆ 330 ಮಂದಿ

Date:

Advertisements

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು ಗಾಯಾಳುಗಳಾಗುತ್ತಿದ್ದಾರೆ.

ಕಳೆದ ವರ್ಷ 2023ರಲ್ಲಿ ರಾಜ್ಯದಲ್ಲಿ ಬರೋಬ್ಬರಿ 43,440 ಅಪಘಾತಗಳಲ್ಲಿ 52,531 ಜನಗಾಯಗೊಂಡಿದ್ದರೇ, 12,327 ಜನ ಸಾವನ್ನಪ್ಪಿದ್ದಾರೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

“2023ರಲ್ಲಿ ಬೀದರ್‌ ಜಿಲ್ಲೆಯಲ್ಲಿ ಒಟ್ಟು 1097 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 330 ಮಾರಣಾಂತಿಕ ಅಪಘಾತ ಸಂಭವಿಸಿದರೇ, 767 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಸಂಭವಿಸಿದ 1097 ಅಪಘಾತಗಳಲ್ಲಿ 1404 ಜನಗಾಯಗೊಂಡಿದ್ದರೇ, 335 ಜನ ಸಾವನ್ನಪ್ಪಿದ್ದಾರೆ” ಎಂಬ ಅಂಕಿಅಂಶಗಳ ಮಾಹಿತಿಯ ಕೋಷ್ಠಕವನ್ನು ಅಲೋಕ್ ಕುಮಾರ್ ʼಎಕ್ಷ್‌ʼ ನಲ್ಲಿ ಹಂಚಿಕೊಂಡಿದ್ದಾರೆ.

Advertisements

https://x.com/alokkumar6994/status/1768228972888740312?s=20

ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾರಣಾಂತಿಕ ಅಪಘಾತಗಳಲ್ಲಿ 5% ಹೆಚ್ಚಳವಾಗಿದೆ. ಅಜಾಗರೂಕ ಚಾಲನೆ, ಕಳಪೆ ಚಾಲನಾ ಕೌಶಲ್ಯ, ಕಳಪೆ ರಸ್ತೆಗಳು, ಪಾದಚಾರಿಗಳಿಗೆ ಅಸಮರ್ಪಕ ಸೌಲಭ್ಯ ಸೇರಿದಂತೆ ಇನ್ನಿತರ ಅಂಶಗಳು ಅಪಘಾತಗಳಿಗೆ ಕಾರಣಗಳಾಗಿವೆ. ಸದ್ಯ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್‌ ಧರಿಸುವುದನ್ನು ಮರೆಯಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರ ನೇತ್ರತ್ವದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿದ್ದರೂ ವಾಹನ ಸವಾರರು ಕಿವಿಗೊಡದೆ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X