ಭ್ರಷ್ಟಾಚಾರಕ್ಕೆ ಕಡಿವಾಣ: ಜಾರಿ ನಿರ್ದೇಶನಾಲಯವನ್ನು ಹೊಗಳಿದ ನರೇಂದ್ರ ಮೋದಿ

Date:

Advertisements

ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ ವಿಪಕ್ಷಗಳು ಆತಂಕಕ್ಕೆ ಒಳಗಾಗಿವೆ. ತಮ್ಮ ಸರ್ಕಾರದ ಪ್ರಮುಖ ಉದ್ದೇಶ ಭ್ರಷ್ಟಾಚಾರವನ್ನು ಮುಕ್ತಾಯಗೊಳಿಸುವುದು.ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ತನಿಖಾ ಸಂಸ್ಥೆಯು ಸಂಪೂರ್ಣ ಮುಕ್ತವಾಗಿದೆ ಎಂದು ದೃಢಪಡಿಸಿದರು.

2014ರ ಮೊದಲು ಕೆಲಸ ಮಾಡುವುದಕ್ಕೆ ತನಿಖಾ ಸಂಸ್ಥೆಯನ್ನು ಅನುಮತಿಸುತ್ತಿರಲಿಲ್ಲ.ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಕೆಲವು ಸಂಖ್ಯೆಗಳ ಪ್ರಕರಣಗಳನ್ನು ದಾಖಲಿಸಲಾಗಿತ್ತು ಎಂದು ಪ್ರಧಾನಿ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

“ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. 2014ಕ್ಕೂ ಮುನ್ನ ಪಿಎಂಎಲ್‌ಎ ಅಡಿ 1800 ಪ್ರಕರಣಗಳು ದಾಖಲಾಗಿತ್ತು. ಕಳೆದ 10 ವರ್ಷಗಳಲ್ಲಿ 4700 ಪ್ರಕರಣಗಳು ದಾಖಲಾಗಿವೆ. 2014ಕ್ಕೂ ಮುನ್ನ 5 ಸಾವಿರ ಕೋಟಿ ಮೊತ್ತದ ಅಸ್ತಿಯನ್ನು ಜಫ್ತಿ ಮಾಡಲಾಗಿತ್ತು. ಆದರೆ 10 ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ. ದೂರುಗಳ ತನಿಖೆ 10 ಪಟ್ಟು ಹೆಚ್ಚಾಗಿದೆ” ಎಂದು ಮೋದಿ ಹೇಳಿದರು.

ಇ.ಡಿ ಭಯೋತ್ಪಾದನೆಗೆ ಆರ್ಥಿಕ ನೆರವು, ಸೈಬರ್ ಅಪರಾಧ ಹಾಗೂ ನಾರ್ಕೋಟಿಕ್ಸ್‌ನಲ್ಲಿ ಭಾಗಿಯಾದ ಹಲವು ಅಪರಾಧಿಗಳನ್ನು ಬಂಧಿಸಿ ದೊಡ್ಡ ಮೊತ್ತದ ಅಪರಾಧಗಳನ್ನು ಬಯಲಿಗೆಳದು ಒಟ್ಟು 1 ಸಾವಿರ ಕೋಟಿ ರೂ. ಮೊತ್ತದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ” ಪ್ರಧಾನಿ ಹೇಳಿದರು.

ಈ ರೀತಿಯ ಅನುಸರಣೀಯ ಕೆಲಸಗಳು ನಡೆದಾಗ ಕೆಲವು ವ್ಯಕ್ತಿಗಳಿಗೆ ತೊಂದರೆ ಉಂಟಾಗುವುದು ಸಹಜ. ಈ ಕಾರಣಕ್ಕಾಗಿ ಅವರು ಮೋದಿಯನ್ನು ದಿನವಿಡಿ ನಿಂದಿಸುವುದಕ್ಕೆ ಶುರು ಮಾಡಿದ್ದಾರೆ.ಆದರೆ ದೇಶವು ಕ್ಷಮಿಸಿ ಎಂದು ಸ್ಪಷ್ಟವಾಗಿ ಹೇಳಿದೆ ಮೋದಿ ಎಂದರು.

“ತಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ಕೆಲಸ ಮಾಡುತ್ತಿದ್ದರೆ, ವಿಪಕ್ಷದವರು ಅಧಿಕಾರದ ಕನಸು ಕಾಣುತ್ತಿದ್ದಾರೆ” ಎಂದು ಪ್ರತಿಪಕ್ಷದ ವಿರುದ್ಧ ಹರಿಹಾಯ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X