ಶೇ.95ರಷ್ಟು ಖಾಸಗಿ ನೀರಿನ ಟ್ಯಾಂಕರ್ ನೋಂದಣಿ ಕಾರ್ಯ ಪೂರ್ಣ: ಜಲಮಂಡಳಿ ಅಧ್ಯಕ್ಷ

Date:

Advertisements
  • ಕೊಳಚೆ ಪ್ರದೇಶದ ಭಾಗಗಳಿಗೆ ಸಮರ್ಪಕ ನೀರು ಪೂರೈಸುವಂತೆ ಸೂಚನೆ
  • ನೋಂದಣಿ ಆಗದ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ

“ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್‌ಗಳನ್ನ ಈಗಾಗಲೇ ನೋಂದಾಯಿಸಲಾಗಿದೆ. ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಮಾರ್ಚ್‌ 17ರಂದು ಬೆಂಗಳೂರಿನ ಕೊಳಚೆ ಪ್ರದೇಶಗಳಾದ ಭಾಶ್ಯಾಂ ಪಾರ್ಕ್, ದೀನ ಬಂಧು ನಗರ, ಶ್ರೀ ರಾಮ ನಗರಿ ಸೇರಿದಂತೆ ಜನಸಂದ್ರತೆಯ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರೊಂದಿಗೆ ನೀರಿನ ವಿತರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಮುಂದುವರೆದು ಮಾತನಾಡಿದ ಅವರು, “ಕಾವೇರಿ ನೀರಿನ ಸಂಪರ್ಕ ಇರುವಂತಹ ಪ್ರದೇಶಗಳಲ್ಲಿ ಈಗಾಗಲೇ ಸಮರ್ಪಕವಾದ ವಿತರಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದರು.

Advertisements

“ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನಗರದ ಎಲ್ಲ ಭಾಗದಲ್ಲಿ ಟ್ಯಾಂಕ್‌ಗಳನ್ನು ಅಳವಡಿಸುವ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಸುವ ಖಾಸಗಿ ಟ್ಯಾಂಕರ್‌ಗಳ ನೋಂದಣಿ ಪ್ರಕ್ರಿಯೆಯ ಗಡುವು ದಿನಾಂಕ ಮಾರ್ಚ್ 15ಕ್ಕೆ ಮುಗಿದಿದೆ. ಶೇ.95 ರಷ್ಟು ನೀರಿನ ಖಾಸಗಿ ಟ್ಯಾಂಕರ್‌ಗಳನ್ನ ನೋಂದಾಯಿಸಲಾಗಿದೆ. ಕೆಲವೆಡೆ ಟ್ರ್ಯಾಕ್ಟರ್ ಮಾರ್ಪಾಡಿಸಿ ನೀರಿನ ಟ್ಯಾಂಕರ್‌ಗಳಾಗಿ ಪರಿವರ್ತಿಸಲಾಗಿದೆ. ಇವುಗಳ ಮೇಲೆಯೂ ನಿಗಾ ಇಡಲಾಗುವುದು. ನೋಂದಣಿಗೆ ಗಡುವು ನೀಡಿದ ಸಮಯದಲ್ಲಿ ನೋಂದಣಿ ಮಾಡದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮಾಲೀಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ನೀರಿನ ಸಮಸ್ಯೆ | ಪರ್ಯಾಯ ಮಾರ್ಗ ಹುಡುಕದೆ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರ: ಆರ್ ಅಶೋಕ್ ಟೀಕೆ

“ನಗರದ ಹೊರಭಾಗದಲ್ಲಿ ಇರುವಂತಹ ಗ್ರಾಮಗಳಿಗೆ ಇನ್ನು ಕಾವೇರಿ ನೀರಿನ ಸಂಪರ್ಕ ನೀಡಲಾಗಿಲ್ಲ. ಈ ಭಾಗದಲ್ಲಿ ಅಂತರ್ಜಲದ ಮೇಲೆ ಹೆಚ್ಚಿನ ಅವಲಂಬನೆ ಇದೆ. ಈ ಪ್ರದೇಶದಲ್ಲಿ ಬಿಬಿಎಂಪಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ನಗರದ ಹೊರಭಾಗದ ಗ್ರಾಮಗಳಿಗೂ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದಿನದ 24 ಗಂಟೆಗಳ ಕಾಲ ನಗರದ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಮಂಡಳಿ ವತಿಯಿಂದ ನಿಗಾ ವಹಿಸಲಾಗುತ್ತಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X