ಚುನಾವಣಾ ಬಾಂಡ್ | ಯಾವುದನ್ನೂ ಮುಚ್ಚಿಡದೆ ಎಲ್ಲ ಮಾಹಿತಿ ಬಹಿರಂಗಗೊಳಿಸಿ: SBIಗೆ ಸುಪ್ರೀಂ ತಪರಾಕಿ

Date:

Advertisements

ಚುನಾವಣಾ ಬಾಂಡ್ ವಿಚಾರವಾಗಿ ಎಸ್‌ಬಿಐ ವಿರುದ್ಧ ಮತ್ತೆ ಗರಂ ಆಗಿರುವ ಸುಪ್ರೀಂ ಕೋರ್ಟ್‌, ಯಾವುದನ್ನೂ ಕೂಡ ಮುಚ್ಚಿಡದೆ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿ ಎಂದು ಖಡಕ್ ಸೂಚನೆ ನೀಡಿದೆ.

ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಇಂದು ಮತ್ತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ, ಯಾವುದೇ ಮಾಹಿತಿಯನ್ನು ಹತ್ತಿಕ್ಕಲಾಗಿಲ್ಲ ಮತ್ತು ಮುಚ್ಚಿಟ್ಟಿಲ್ಲ ಎಂದು ಪ್ರಮಾಣೀಕರಿಸಿದ ಅಫಿಡವಿಟ್‌ ಅನ್ನು ಗುರುವಾರ ಸಂಜೆ 5 ಗಂಟೆಯೊಳಗೆ ಸಲ್ಲಿಸುವಂತೆಯೂ ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸ್ಪಷ್ಟ ಆದೇಶ ನೀಡಿದ್ದಾರೆ.

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿರುವ ವಿಶಿಷ್ಟ ಸಂಖ್ಯೆಯ(Unique Alphanumeric Numbers) ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಸಲ್ಲಿಸದಿರುವ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆಯ ಸಂದರ್ಭದಲ್ಲಿ, ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪಕ್ಷಪಾತಿ ಆಗಬೇಡಿ(Selective) ಎಂದು ಕೂಡ ಇಂದಿನ ವಿಚಾರಣೆಯ ವೇಳೆ ಸ್ಪಷ್ಟ ಸೂಚನೆಯನ್ನು ಸುಪ್ರೀಂ ಕೋರ್ಟ್‌ ನೀಡಿದೆ.

Advertisements

ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲ ವಿವರಗಳನ್ನು ಬಹಿರಂಗಪಡಿಸುವಂತೆ ನಾವು ಎಸ್‌ಬಿಐಗೆ ತಿಳಿಸಿದ್ದೇವೆ ಎಂದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್, ಯಾವುದೇ ಮಾಹಿತಿಯನ್ನು ಮರೆಮಾಚಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆಯೂ ಇದೇ ವೇಳೆ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

“ಏನನ್ನು ಬಹಿರಂಗಪಡಿಸಬೇಕೆಂದು ಹೇಳಿ ನಾವು ಒದಗಿಸುತ್ತೇವೆ ಎಂಬಂತಹ ಧೋರಣೆಯನ್ನು ಎಸ್‌ಬಿಐ ಹೊಂದಿರುವಂತಿದೆ. ಇದು ಸರಿಯಲ್ಲ, ನಾವು ಎಲ್ಲ ವಿವರಗಳನ್ನು ಕೊಡಿ ಎಂದು ಈಗಾಗಲೇ ಹೇಳಿದ್ದೇವೆ. ಸ್ಪಷ್ಟವಾಗಿ ತಿಳಿಸಿದ ನಂತರ ನಿಮ್ಮಲ್ಲಿರುವ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗೊಳಿಸಬೇಕು. ಯಾವುದನ್ನೂ ಕೂಡ ಅದುಮಿಡಬೇಡಿ” ಎಂದು ಸಿಜೆಐ ಡಿವೈ ಚಂದ್ರಚೂಡ್ ಎಸ್‌ಬಿಐಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X