ಬೆಂ.ನಗರ | ಬೇಸಿಗೆಯಲ್ಲೂ ಮೈದುಂಬಿರುವ ಬನ್ನೇರುಘಟ್ಟ ಕೆರೆಗಳು

Date:

Advertisements

ಬನ್ನೇರುಘಟ್ಟ ಜೈವಿಕ ಉದ್ಯಾನವು ನೀರಿನ ಬವಣೆಯನ್ನು ನಿವಾರಿಸಿಕೊಳ್ಳಲು ಪಾರಂಪರಿಕ ಜೈವಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಬೇಸಿಗೆ ಬಿರು ಬಿಸಿಲಿನಿಂದಾಗಿ ಎಲ್ಲೆಡೆ ಕೆರೆಗಳು ಬತ್ತಿ ಹೋಗಿದ್ದರೂ ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕೆರೆಗಳಲ್ಲಿ ನೀರಿರುವುದರಿಂದ ಇಲ್ಲಿನ ಪ್ರಾಣಿ ಪಕ್ಷಿಗಳಿಗೆ ನೀರಿನ ಸಮಸ್ಯೆ ನೀಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೆಕಲ್‌ ತಾಲೂಕಿನಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನ ಸುಮಾರು 731 ಹೆಕ್ಟೇರ್‌ ಪ್ರದೇಶ ಹೊಂದಿದೆ. ಇಲ್ಲಿ ಸಸ್ಯಹಾರಿ ಪ್ರಾಣಿಗಳ ಸಫಾರಿ, ಹುಲಿ-ಸಿಂಹ ಸಫಾರಿ, ಮೃಗಾಲಯ, ಕರಡಿ ಸಫಾರಿ ಸೇರಿದಂತೆ ವಿವಿಧ ಸಫಾರಿ ಮತ್ತು ಮೃಗಾಲಯದಲ್ಲಿ ಸುಮಾರು 3,000ಕ್ಕೂ ಹೆಚ್ಚು ಪ್ರಾಣಿಗಳಿದ್ದು, ಆನೆಗಳು ಪರಸ್ಪರ ನೀರು ಎರಚಿಕೊಂಡು ಬಿಸಿಲಿನ ಬೇಗೆಯನ್ನು ತಣಿಸಿಕೊಳ್ಳುತ್ತಿದ್ದು, ಬಿಸಿಲಿನ ಬೇಗೆಯಿಂದ ಮುಕ್ತಿ ಪಡೆಯಲು ನೀರಿನಲ್ಲಿಯೇ ಹೆಚ್ಚು ಸಮಯ ಕಳೆಯಲು ಇಷ್ಟ ಪಡುತ್ತಿವೆ.

ಸಸ್ಯಹಾರಿ ಸಫಾರಿಯಲ್ಲಿಯೇ 2000ಕ್ಕೂ ಹೆಚ್ಚು ಪ್ರಾಣಿಗಳಿವೆ. ಈ ಎಲ್ಲ ಪ್ರಾಣಿಗಳಿಗೂ ನೀರು ಒದಗಿಸುವುದು ಹರಸಾಹಸವಾಗಿದೆ. ಆದರೆ ಜೈವಿಕ ಉದ್ಯಾನದಲ್ಲಿರುವ ಹಲವು ಕೆರೆಗಳು ಈ ಪ್ರಾಣಿಗಳಿಗೆ ನೀರಿನ ಆಸರೆಯಾಗಿವೆ.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಕಾವಲು ಕೆರೆ, ಸೀಗೇಕಟ್ಟೆ ಕೆರೆ, ಗದ್ದೆಹಳ್ಳನ ಕೆರೆ, ಪುಟ್ಟನ ಕುಂಟೆ, ಮೋಟಣ್ಣನ ಕೆರೆ ಇವುಗಳ ಜತೆಗೆ ಎರಡು ಕಿರು ಅಣೆಕಟ್ಟುಗಳಿವೆ. ಇವುಗಳು ಜೈವಿಕ ಉದ್ಯಾನದ ಪ್ರಾಣಿಗಳಿಗೆ ನೀರಿನ ಮೂಲಗಳಾಗಿವೆ. ಇತ್ತೀಚೆಗೆ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಎರಡು ಕೊಳವೆ ಬಾವಿಗಳನ್ನು ಬೊಮ್ಮಸಂದ್ರದ ಗೌರಮ್ಮ ತಿಮ್ಮಾರೆಡ್ಡಿ ಪ್ರತಿಷ್ಠಾನದಿಂದ ಕೊರೆಯಿಸಲಾಗಿದ್ದು, ಉತ್ತಮ ನೀರು ದೊರೆತಿದೆ. ನೀರಿನ ಪೂರೈಕೆಗೆ ವಿದ್ಯುತ್‌ ಸಮಸ್ಯೆಯಾಗದಂತೆ ಸಂಪೂರ್ಣ ಸೋಲಾರ್‌ ವಿದ್ಯುತ್ ವ್ಯವಸ್ಥೆಯನ್ನು ಫೌಂಡೇಷನ್‌ ಮಾಡಿದೆ. ಈ ಕೊಳವೆ ಬಾವಿಗಳಲ್ಲಿಯೂ ಉತ್ತಮ ನೀರಿದ್ದು ಉದ್ಯಾನದ ಟ್ಯಾಂಕರ್‌ಗಳ ಮೂಲಕ ಅವಶ್ಯಕವಿರುವೆಡೆಗೆ ಸರಬರಾಜು ಮಾಡುತ್ತಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನದ ಕೆರೆಗೆ ವಲಸೆ ಬಂದಿರುವ ಬಣ್ಣದ ಕೊಕ್ಕರೆಗಳು ಆಹಾರದ ಬೇಟೆಯಲ್ಲಿ ತೊಡಗಿವೆ. ಬನ್ನೇರುಘಟ್ಟ ಉದ್ಯಾನದ ಜತೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿನ ದೊಡ್ಡಣ್ಣನ ಕೆರೆಯಲ್ಲಿ ನೀರು ಉತ್ತಮವಾಗಿದ್ದು, ರಾಷ್ಟ್ರೀಯ ಉದ್ಯಾನದ ಕಾಡುಪ್ರಾಣಿಗಳಿಗೆ ಪ್ರಮುಖ ಜಲಮೂಲವಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಸಿಲ ಬೇಗೆಯಲ್ಲಿದ್ದ ಜಿಲ್ಲೆಯ ಜನರಿಗೆ ತಂಪೆರೆದ ಮಳೆ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಬೊಮ್ಮಸಂದ್ರ ಗೌರಮ್ಮ ತಿಮ್ಮಾರೆಡ್ಡಿ ಪ್ರತಿಷ್ಠಾನದಿಂದ ಕೊಳವೆ ಬಾವಿ ಮತ್ತು ಸೋಲಾರ್‌ ವಿದ್ಯುತ್‌ ವ್ಯವಸ್ಥೆ ಮಾಡಿದ್ದಾರೆ. ಆನೆ, ಚಿರತೆ, ಕಾಡೆಮ್ಮೆ, ಕಡವೆಗಳು ಕೆರೆಯನ್ನು ಅವಲಂಬಿಸಿವೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಹಲವಾರು ಕೆರೆಗಳಿದ್ದು, ಈ ಪೈಕಿ 50ಕ್ಕೂ ಹೆಚ್ಚು ಕೆರೆಗಳಲ್ಲಿ ಉತ್ತಮ ನೀರಿರುವುದಾಗಿ ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X