ಬಂಗಾಳ ಡಿಜಿಪಿ ಸೇರಿ 6 ರಾಜ್ಯದ ಗೃಹ ಕಾರ್ಯದರ್ಶಿಗಳ ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ

Date:

Advertisements

ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ವರ್ಗಾವಣೆಗೊಳಿಸಿದೆ. ಈ ಹಿರಿಯ ಅಧಿಕಾರಿಗಳು ತಮ್ಮ ರಾಜ್ಯದ ಮುಖ್ಯಮಂತ್ರಿ ಕಚೇರಿಯ ಉಸ್ತುವಾರಿಯಾಗಿದ್ದರು.

ಇದಲ್ಲದೆ, ಮಿಜೋರಾಂ ಹಾಗೂ ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳನ್ನು ಸಹ ವರ್ಗಾವಣೆಗೊಳಿಸಲಾಗಿದೆ. ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಇಕ್ಬಾಲ್ ಸಿಂಗ್‌ ಚಹಾಲ್ ಅವರನ್ನು ಹುದ್ದೆಯಿಂದ ಬೇರೆಡೆ ನಿಯೋಜಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಏಪ್ರಿಲ್‌ 19ರಂದು ಲೋಕಸಭೆ ಚುನಾವಣೆ ಆರಂಭಗೊಳ್ಳಲಿದ್ದು, ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. ಜೂನ್‌ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ.

ಶುಕ್ರವಾರ ಲೋಕಸಭೆ ಚುನಾವಣೆ ಘೋಷಣೆಯ ದಿನದಂದು ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, ಎಲ್ಲ ಪಕ್ಷಗಳು ಮತ್ತು ಅಲ್ಲಿನ ನಾಯಕರು ಮಾದರಿ ನೀತಿ ಸಂಹಿತೆಗೆ ಕಟಿಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ.

ಚುನಾವಣೆಗಳ ಮೊದಲು ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಭಾಷಣಗಳು, ಚುನಾವಣಾ ದಿನ, ಮತಗಟ್ಟೆಗಳು, ಅಧಿಕಾರ ಕ್ಷೇತ್ರಗಳು, ಚುನಾವಣಾ ಪ್ರಣಾಳಿಕೆಯ ವಿಷಯ, ಮೆರವಣಿಗೆಗಳು ಹಾಗೂ ಸಾಮಾನ್ಯ ನಡವಳಿಕೆಗಳ ಸಂಬಂಧಿತ ನಿಯಮಗಳು ಒಳಗೊಂಡಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X