ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

Date:

Advertisements

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ ನೀಡಿದೆ.

ರಾಜ್ಯದಲ್ಲಿ ಬರಗಾಲ ಕಾಡುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರು ದನಗಳಿಗೆ ಮೇವು ಸಿಗುತ್ತಿಲ್ಲ, ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯಲು ಡೊಂಬರಾಟ ಆಡುತ್ತಿವೆ. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿದ್ದಾರೆ. ರೈತರು ಸೊರಗುತ್ತಿದ್ದಾರೆ ಹಳ್ಳಿಗಳಿಗೆ ಮತ ಕೇಳಲು ಬರುವ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ  ಛೀಮಾರಿ ಹಾಕಿ ಸ್ವಾಗತ ಮಾಡಿ ಸಮಸ್ಯೆ ಬಗ್ಗೆ ಗಮನ ಸೆಳೆಯಬೇಕು ಎಂದು ಧಾರವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘ ಹೇಳಿದೆ.

ದೇಶದಲ್ಲಿ ಶೇ. 70ರಷ್ಟು ಇರುವ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಲೆ ನಿಗದಿ ಮಾಡಿ ಎಂದರೆ, ರೈತರ ಮೇಲೆ ಗೋಲಿಬಾರ್ ಮಾಡುತ್ತಾರೆ. ಆದರೆ, ಶೇ. 2ರಷ್ಟು ಇರುವ ಸರ್ಕಾರಿ ನೌಕರರಿಗೆ ಶೇ. 58ರಷ್ಟು ಸಂಬಳ ಏರಿಕೆ ಮಾಡಬೇಕು ಎನ್ನುತ್ತ ವರದಿ ಸಲ್ಲಿಸುತ್ತಾರೆ. ಇಂತಹ ಪುರುಷಾರ್ಥಕ್ಕೆ ರೈತರು ಎಂಪಿಗಳನ್ನ ಗೆಲ್ಲಿಸಬೇಕೆ? ದೇಶದಲ್ಲಿ ಅನ್ನ ನೀಡುವ ರೈತನನ್ನು ಅನಾಥರಾಗಿ ಮಾಡಬಾರದು. ಅನ್ನದಾತರು ದೇಶಕ್ಕೆ ಆಶ್ರಯದಾತರಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

Advertisements

ವರ್ಷಾನುಗಟ್ಟಲೇ ಹೋರಾಟ ಮಾಡಿದ ರೈತರ ಒತ್ತಾಯವನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿ ಮಾಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಪ್ರಧಾನಿ ಪ್ರತಿಕ್ರಿಯೆ ನೀಡದಿದ್ದರೆ ದೇಶದ ರೈತರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ. ಬರಗಾಲದ ಸಂಕಷ್ಟದಲ್ಲಿರುವ ಕಬ್ಬು ಸರಬರಾಜು ರೈತರಿಗೆ ಸಕ್ಕರೆ ಕಾರ್ಖಾನೆಗಳು  ಮೂರು ತಿಂಗಳಿಂದ ಕಬ್ಬುಸರಬರಾಜು ಮಾಡಿದ ರೈತರಿಗೆ ಹಣ ಕೊಟ್ಟಿಲ್ಲ ರಾಜಕೀಯ ಪಕ್ಷಗಳ ಎಂಎಲ್ಎ, ಮಂತ್ರಿಗಳೇ ಬಾಕಿ ಉಳಿಸಿಕೊಂಡಿದ್ದಾರೆ. ಇವರಿಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದ ಅವರು. ಒಂದು ವಾರದಲ್ಲಿ ಹಣ ನೀಡದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಗುಂಗಿನಲ್ಲಿ ತೇಲಾಡುತ್ತಿದೆ, ರೈತರು ಬಲಿ ಪಶುಗಳಾಗುತ್ತಿದ್ದಾರೆ, ಜಿಲ್ಲಾಧಿಕಾರಿಗಳು ಚುನಾವಣೆ ಗುಂಗಿನಲ್ಲಿ ನಿರತರಾದರೆ ರೈತರ ಗತಿ ಏನು? ರೈತರ ಸಂಕಷ್ಟ ರಾಜಕೀಯ ಪಕ್ಷಗಳಿಗೆ ಅರಿವಾದರೆ, ರೈತರಿಗೆ ನ್ಯಾಯ ಸಿಗಲು ಸಾಧ್ಯ ಅದಕ್ಕಾಗಿ ಹಳ್ಳಿಗಳಲ್ಲಿ ಚಿಮಾರಿ ಸ್ವಾಗತ ನೀಡಿ ಎಂದು ಕರೆ ನೀಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೀರನಗೌಡ ಪಾಟೀಲ್ ರಾಜ್ಯಕಾರ್ಯಧ್ಯಕ್ಷ, ಉಪಾಧ್ಯಕ್ಷ ಎಂ.ವಿ ಗಾಡಿ, ಎನ್‌.ಎಚ್. ದೇವಕುಮಾರ್, ಹತ್ತಳ್ಳಿ ದೇವರಾಜ್, ಉಳುವಪ್ಪ ಬಳಗೇರಾ, ಪರಶುರಾಮ್ ಎತ್ತಿನಗುಡ್ಡ, ನಿಜಗುಣ ಕೆಲಗೇರಿ ಮಹೇಶ್ ಬೆಳಗಾಂಕರ್, ವಾಸು ದಾಖಪ್ಪನವರ್, ಗುರುಸಿದ್ದಪ್ಪ ಕೋಟಗಿ, ನಾಗೇಂದ್ರ ಜಿವೂಜಿ, ರವಿಕುಮಾರ್, ಎಸ್.ಬಿ. ಸಿದ್ದನಾಳ್, ಶಂಕರ್ ಕಾಜಗಾರ್, ಬರಡನಪುರ ನಾಗರಾಜ್, ಮಾಳಪ್ಪ ಹೊನ್ನಳ್ಳಿ, ಮಲ್ಲೇಶಿ, ಮುಂತಾದವರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X