ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್;‌ ನಿರ್ವಾಹಕನಿಂದ ಮಹಿಳೆಯರಿಗೆ ನಿಂದನೆ

Date:

Advertisements

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್‌ನಲ್ಲಿ ನಿರ್ವಾಹಕ ಮಹಿಳಾ ಪ್ರಯಾಣಿಕರಿಗೆ ಏಕಚವನದಲ್ಲಿ ನಿಂದಿಸಿದ್ದು, ಇತರೆ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

KA-28 F-2351 ಸಂಖ್ಯೆಯ ಬಸ್‌ ಸಂಜೆ 4-30ಕ್ಕೆ ಇಂಡಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ತಮ್ಮ ಪಾಡಿಗೆ ತಾವು ಪರಸ್ಪರ ಮಾತನಾಡಿಕೊಂಡು ಕುಳಿತಿದ್ದರು. ಏಕಾಏಕಿ ಬಂದ ನಿರ್ವಾಹಕ ಗಟ್ಟಿ ಧ್ವನಿಯಲ್ಲಿ ಟಿಕೆಟ್ ತಗೊಳ್ಳುವಂತೆ ಗದರಿದ್ದಾರೆ. ಆದರೂ ಮಹಿಳಾ ಒರಯಾಣಿಕರು ಏನೂ ಮಾತನಾಡದೆ ತಪ್ಪೊಪ್ಪಿಕೊಂಡು ಸುಮ್ಮನಾದರೂ ಕೂಡಾ ಇದಕ್ಕೆ ಅಸಮ್ಮತಿ ತೋರಿದ್ದು, ಮಾತನಾಡುವುದನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ್ದು, ಮಹಿಳೆಯರೊಟ್ಟಿಗೆ ಅಗೌರವದಿಂದ ವರ್ತಿಸಿದ್ದಾರೆ. ಪ್ರಶ್ನೆ ಮಾಡಿದ ಪ್ರಯಾಣಿಕರ ಮೇಲೂ ನಿರ್ವಾಹಕ ಕುಪಿತಗೊಂಡಿದ್ದು, ಕಿರಿ ಉಂಟು ಮಾಡಿದ್ದಾರೆ ಎನ್ನಲಾಗಿದೆ.

“ನಮ್ಮ ತೆರಿಗೆಯಲ್ಲಿ ನಾವು ಪ್ರಯಾಣ ಮಾಡುವುದು ನಿರ್ವಾಹಕರಿಗೆ ಅಪರಾಧಿಗಳಂತೆ ಕಾಣಿಸುತ್ತಿರುವುದು ದುರಂತವೇ ಸರಿ” ಎಂದು ಪ್ರಯಾಣಿಕರು ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ

ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಮಾತಿಗೆ ಮಾತು ಬೆಳೆದು ಬಸ್ಸನ್ನು ರಸ್ತೆಯಲ್ಲಿ ನಿಲ್ಲಿಸಿ ಪ್ರಯಾಣಿಕರಿಗೆ ಕಿರಿಕಿರಿ ಮಾಡಿದ್ದಾರೆ ಎನ್ನಲಾಗಿದೆ.

“ಪ್ರಯಾಣಿಕರ ಜತೆಗೆ ಹೇಗೆ ವರ್ತಿಸಬೇಕು ಎಂಬುದರ ಕುರಿತು ನಿರ್ವಾಹಕರಿಗೆ ತರಬೇತಿ ಕೊಡುವುದು ಅವಶ್ಯಕವಾಗಿದೆ” ಎಂದು ಹಿರಿಯ ನಾಗರಿಕ ಪ್ರಯಾಣಿಕರು ಹಿಡಿ ಶಾಪ ಹಾಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X