ಮತ್ತೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡ ದೆಹಲಿ, ಭಾರತಕ್ಕೆ 3ನೇ ಸ್ಥಾನ

Date:

Advertisements

ಹೊಸ ವರದಿಯ ಪ್ರಕಾರ ಭಾರತದ ರಾಜಧಾನಿ ದೆಹಲಿಯು ಮತ್ತೊಮ್ಮೆ ಕಳಪೆ ಗಾಳಿಯ ಗುಣಮಟ್ಟವನ್ನು ಹೊಂದಿರುವ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡಿದೆ. ಹಾಗೆಯೇ ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದೆ. ಆದರೆ ಐಕ್ಯೂಆರ್‌ ಸಂಸ್ಥೆ 2022ರಲ್ಲಿ ನೀಡಿದ್ದ ವರದಿಯಲ್ಲಿ ಬೇಗುಸರಾಯ್ ಯಾವುದೇ ಸ್ಥಾನವನ್ನು ಪಡೆದಿರಲಿಲ್ಲ.

ಸ್ವಿಸ್ ಸಂಸ್ಥೆ IQAirನ ವಿಶ್ವ ವಾಯು ಗುಣಮಟ್ಟ ವರದಿ 2023 ಪ್ರಕಾರ ಬಾಂಗ್ಲಾದೇಶದಲ್ಲಿರುವ ತಲಾ ಒಂದು ಕ್ಯೂಬಿಕ್ ಮೀಟರ್ ಗಾಳಿಯಲ್ಲಿ 79.9 ಮೈಕ್ರೋಗ್ರಾಂಗಳಷ್ಟು ಪಿಎಂ (Particulate Matter) ಪ್ರಮಾಣ ಕಂಡು ಬಂದಿದ್ದು, ಪಾಕಿಸ್ತಾನದಲ್ಲಿ 73.7 ಮೈಕ್ರೋಗ್ರಾಂಗಳಷ್ಟು ಪಿಎಂ ಕಂಡು ಬಂದಿದೆ. ಭಾರತದಲ್ಲಿನ ತಲಾ ಒಂದು ಕ್ಯೂಬಿಕ್ ಮೀಟರ್ ಗಾಳಿಯಲ್ಲಿ 53.3 ಮೈಕ್ರೋಗ್ರಾಂಗಳಷ್ಟು ಪಿಎಂ (Particulate Matter) ಪ್ರಮಾಣವನ್ನು ಗುರುತಿಸಲಾಗಿದ್ದು ಭಾರತ ವಿಶ್ವದಲ್ಲೇ ಮೂರನೇ ಅತೀ ಕಲುಷಿತ ದೇಶವಾಗಿದೆ.

ಇದನ್ನು ಓದಿದ್ದೀರಾ?  ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

IQAir ಸಂಸ್ಥೆ ಜಾಗತಿಕವಾಗಿ ಸುಮಾರು ಮೂವತ್ತು ಸಾವಿರ ವಾಯುಗುಣಮಟ್ಟ ತಪಾಸಣಾ ಕೇಂದ್ರಗಳು, ಮಾಲಿನ್ಯಕ್ಕೆ ಸಂಬಂಧಿಸಿತ ಸರ್ಕಾರಿ ಸಂಸ್ಥೆಗಳು, ಎನ್‌ಜಿಒ ಹಾಗೂ ವಿಶ್ವವಿದ್ಯಾಲಯಗಳ ಸಂಶೋಧನಾ ಕೇಂದ್ರಗಳನ್ನು ಬಳಸಿಕೊಂಡು ವರದಿ ಸಿದ್ಧಪಡಿಸಿದೆ. ಇನ್ನು ಕಳಪೆ ವಾಯುಗುಣವು ಇತ್ತೀಚೆಗೆ ಜನರ ಸಾವಿಗೆ ಪ್ರಮುಖ ಕಾರಣವಾಗಿದೆ. ಈ ಕಾರಣದಿಂದಾಗಿ ಜಾಗತಿಕವಾಗಿ ಪ್ರತಿ ವರ್ಷ ಸುಮಾರು 70 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿ ಹೇಳುತ್ತದೆ.

2022ರಲ್ಲಿ ಭಾರತ ವಿಶ್ವದಲ್ಲೇ ಅತೀ ಕುಷಿತ ದೇಶಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿತ್ತು. ಆದರೆ ಈಗ ಮೂರನೇ ಸ್ಥಾನಕ್ಕೆ ಏರಿದೆ. 118.9 ಮೈಕ್ರೋಗ್ರಾಮ್ ಪಿಎಂ ಪ್ರಮಾಣದೊಂದಿಗೆ ಬೇಗುಸರಾಯ್ ವಿಶ್ವದಲ್ಲೇ ಅತೀ ಕಳಪೆ ವಾಯುಗುಣವನ್ನು ಹೊಂದಿರುವ ನಗರ ಎಂಬ ಕುಖ್ಯಾತಿಯನ್ನು ಪಡೆದುಕೊಂಡರೆ, ದೆಹಲಿಯು 89.1 ಮೈಕ್ರೋಗ್ರಾಮ್ ಪಿಎಂ ಪ್ರಮಾಣದೊಂದಿಗೆ ವಿಶ್ವದಲ್ಲೇ ಅತೀ ಕಳುಷಿತ ರಾಜಧಾನಿ ಎನಿಸಿಕೊಂಡಿದೆ. ಅಷ್ಟು ಮಾತ್ರವಲ್ಲದೆ 2018ರಿಂದ ಈವರೆಗೆ ನಾಲ್ಕು ವರ್ಷಗಳಿಂದ ಅತೀ ಕಳಪೆ ವಾಯುಗುಣ ಹೊಂದಿರುವ ರಾಜಧಾನಿ ನಗರವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸಿನ ಪ್ರಕಾರ ಅತ್ಯಂತ ಉತ್ತಮ ವಾಯುಗುಣ ಪಿಎಂ ಪ್ರಮಾಣ 2.5 ಮೈಕ್ರೋಗ್ರಾಮ್ ಆಗಿದೆ. ಭಾರತದಲ್ಲಿ ಶೇಕಡ 66ರಷ್ಟು ನಗರಗಳು ಸರಾಸರಿ 35 ಮೈಕ್ರೋಗ್ರಾಮ್ ಪಿಎಂ ಪ್ರಮಾಣವನ್ನು ಹೊಂದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X