ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಲು ಚರ್ಚೆಯಾಗಿದೆ, ಮೈತ್ರಿಯಲ್ಲಿ ಬಿರುಕು ಇಲ್ಲ: ಕುಮಾರಸ್ವಾಮಿ

Date:

Advertisements

ಜೆಡಿಎಸ್​-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಪ್ರಾರಂಭದಿಂದಲೂ ನಾವು ಮೂರು ಕ್ಷೇತ್ರ ಕೇಳಿದ್ದೇವೆ. ನಾವು ಕೇಳಿದ್ದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವಿಸಿದ್ದಾರೆ. ಸೋಮವಾರದ ಸಭೆಯಲ್ಲಿ 28 ಕ್ಷೇತ್ರದಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅಂತ ಚರ್ಚೆಯಾಗಿದೆ” ಎಂದರು.

ಬಿಜೆಪಿ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಕಾರಣ​

Advertisements

“ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್. ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ. ಜನ ತಿರಸ್ಕಾರ ಮಾಡಿದಾಗ ನಮ್ಮ ಮನೆ ಬಾಗಿಲಿಗೆ ಬಂದ್ದಿದ್ದು ನೀವು. ಈಗ ಬನ್ನಿ ಕಾಂಗ್ರೆಸ್​ಗೆ ಅಂತ ಡಿ ಕೆ ಶಿವಕುಮಾರ್ ಕರೆಯುತ್ತಿದ್ದಾರೆ” ಎಂದರು.

“ಕಾಂಗ್ರೆಸ್ ಜತೆ ಸರ್ಕಾರ ಮಾಡಿದಾಗ ಪಕ್ಷ ನಾಶಕ್ಕೆ ಹೊರಟಿದ್ದರು. ನಮ್ಮ ಶಾಸಕರಿಗೆ ಬ್ರೈನ್ ವಾಶ್ ಮಾಡಿ ಪಕ್ಷಕ್ಕೆ ಸೇರಿಸಿಕೊಂಡರು. ಹಂತ ಹಂತವಾಗಿ ರಾಜಕೀಯವಾಗಿ ಮುಗಿಸಲು ಪ್ರಯತ್ನ ಮಾಡಿದ್ರಿ. ಯಾವ ರೀತಿ ನಮ್ಮ ಶಕ್ತಿ ಕುಂದಿಸಲು ಯತ್ನಿಸಿದ್ದೀರಿ” ಎಂದು ಗೊತ್ತು ಎಂದು ಡಿಕೆಶಿ ವಿರುದ್ಧ ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು; ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ!

“ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಡಿ ಕೆ ಶಿವಕುಮಾರ್ ಅಯ್ಯೋ ಪಾಪ ಎಂದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನೀವು ಮಂಡ್ಯದಲ್ಲಿ ಏನೂ ಮಾಡಿದ್ದಿರಾ ಅಂತ ಗೋತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಜಯದೇವ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ನೀವು ಕಾರಣ” ಎಂದರು.

“ನಮ್ಮ ಕಾರ್ಯಕರ್ತರಿಗೆ ಕಾಂಗ್ರೆಸ್​ಗೆ ಬನ್ನಿ ಎಂದು ಕರೆ ಕೊಡುತ್ತಿರಾ? ನನ್ನ ಕಾರ್ಯಕರ್ತರಿಗೆ ನಿಮ್ಮಿಂದ ರಕ್ಷಣೆ ಪಡೆಯುವ ದುಸ್ಥಿತಿ ಬಂದಿಲ್ಲ. ಪದೇ ಪದೇ ಬಿಜೆಪಿ ಬಿಟೀಮ್ ಎಂದು ಹೇಳಿದ್ರಿ. ಹಂತ ಹಂತವಾಗಿ ನಮ್ಮ ಪಕ್ಷ ಮುಗಿಸಲು ಪ್ರಯತ್ನ ಪಟ್ಟಿದ್ದೀರಿ, ರಾಜಕೀಯವಾಗಿ ನಮಗೆ ವಿಷ ಹಾಕಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X