ಜಾಹಿರಾತು ಪ್ರಕರಣ: ನೆಪ ನಿಲ್ಲಿಸಿ ಖುದ್ದು ಹಾಜರಾಗುವಂತೆ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸೂಚನೆ

Date:

Advertisements

ಪತಾಂಜಲಿ ಆಯುರ್ವೇದ ಸಂಸ್ಥೆಯ ದಾರಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ಇನ್ನೆರಡು ವಾರಗಳಲ್ಲಿ ಖುದ್ದು ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪತಾಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಆಚಾರ್ಯ ಬಾಲಕೃಷ್ಣ ಅವರು ಕೂಡ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.

ಕಳೆದ ಫೆ.27 ರಂದು ರಕ್ತದೊತ್ತಡ, ಮಧುಮೇಹ, ಅಸ್ತಮ ಹಾಗೂ ಬೊಜ್ಜು ಮುಂತಾದ ಕಾಯಿಲೆಗಳ ಔಷಧಿಗಳ ಬಗ್ಗೆ ಜಾಹಿರಾತು ಪ್ರಕಟಣೆಯನ್ನು ಪತಾಂಜಲಿ ಆಯುರ್ವೇದ ಸಂಸ್ಥೆ ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಾಂಜಲಿ ಆಯುರ್ವೇದ ಸಂಸ್ಥೆ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ನಿಂದನೆಯ ನೋಟಿಸ್ ಕೂಡ ಜಾರಿಗೊಳಿಸಲಾಗಿತ್ತು.

ಪತಾಂಜಲಿ ಆಯೂರ್ವೇದ ಸಂಸ್ಥೆ ತಪ್ಪು ದಾರಿಗೆಳೆಯುವ ಜಾಹಿರಾತುಗಳನ್ನು ಪ್ರಸಾರ ಮಾಡುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ನಿಂದನೆಯ ನೋಟಿಸ್ ಜಾರಿಗೊಳಿಸಲಾಗಿತ್ತು.

Advertisements

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ನಿರ್ದೇಶನಗಳ ಹೊರತಾಗಿಯೂ ಪ್ರತಿಕ್ರಿಯೆ ನೀಡುತ್ತಿಲ್ಲದಿರುವುದನ್ನು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹಾಗೂ ಅಮಾನುಲ್ಲಾ ನೇತೃತ್ವದ ಪೀಠ ಗಮನಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಬಾಬಾ ರಾಮ್‌ದೇವ್‌ ಕೋರ್ಟ್‌ಗೆ ಖುದ್ದು ಹಾಜರಾಗುವುದು ಮಾತ್ರವಲ್ಲದೆ, ನ್ಯಾಯಾಂಗ ನಿಂದನೆಗೆ ಒಳಪಟ್ಟಿರುವ ಕಾರಣ ರಾಮ್‌ದೇವ್‌ ಮೇಲೆ ಏಕೆ ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿದೆ.

ಔಷಧ ಹಾಗೂ ಮ್ಯಾಜಿಕ್ ರೆಮಿಡಿಸ್ ಕಾಯ್ದೆಯ ಸೆಕ್ಷನ್ 3 ಮತ್ತು 4ರ ನಿಬಂಧನೆಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ವಿಚಾರಣೆಯ ಸಂದರ್ಭದಲ್ಲಿ ನೀಡಿದ ಶೋಕಾಸ್ ನೋಟಿಸ್‌ಗೆ ಪ್ರತಿವಾದಿಗಳು ಸೂಕ್ತ ವಿವರಣೆ ನೀಡಿಲ್ಲ ಎಂಬುದನ್ನು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಕೊಹ್ಲಿ ತಿಳಿಸಿದರು.

ನ್ಯಾಯಾಂಗ ನಿಂದನೆ ಅರ್ಜಿಗೆ ಯಾಕೆ ಪ್ರತಿಕ್ರಿಯೆ ನೀಡಿಲ್ಲ. ನಿಮ್ಮ ಕಕ್ಷಿದಾರರಿಗೆ ಕೋರ್ಟ್‌ಗೆ ಹಾಜರಾಗಲು ತಿಳಿಸಿ.ಈಗ ರಾಮ್‌ದೇವ್‌ ಅವರನ್ನು ಪಾರ್ಟಿಯನ್ನಾಗಿ ಕೂಡ ಮಾಡುತ್ತೇವೆ. ಇಬ್ಬರು ಕೋರ್ಟ್‌ಗೆ ಹಾಜರಾಗಬೇಕೆಂದು ಬಾಬಾ ರಾಮ್‌ದೇವ್‌ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಮುಕುಲ್ ರೊಹ್ಟಗಿ ಅವರಿಗೆ ಪೀಠ ಪ್ರಶ್ನಿಸಿತು.

ತಪ್ಪು ದಾರಿಗೆಳೆಯುವ ಜಾಹಿರಾತು ಪ್ರಕಟಿಸಿದ್ದಕ್ಕಾಗಿ ಪತಾಂಜಲಿ ಆಯುರ್ವೇದ ಕಂಪನಿಯ ವಿರುದ್ಧ ವಿವಿಧ ಕಂಪನಿಗಳು 35,556 ಪ್ರಕರಣಗಳನ್ನು ದಾಖಲಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X