ಚುನಾವಣೆಗಳಲ್ಲಿ ರಣಕಹಳೆ ಚಿಹ್ನೆ ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಅನುಮತಿ

Date:

Advertisements

ಶರದ್‌ ಪವಾರ್‌ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.

‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್‌ ಪವಾರ್ ಬಣಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿತು. ಅಲ್ಲದೆ ಈ ಚಿಹ್ನೆಯನ್ನು ಬೇರೆ ಪಕ್ಷ ಅಥವಾ ಅಭ್ಯರ್ಥಿಗೆ ನೀಡದಂತೆ ಆಯೋಗಕ್ಕೆ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಅಜಿತ್ ಪವಾರ್‌ ಬಣದ ಎನ್‌ಸಿಪಿಗೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಎನ್‌ಸಿಪಿ ಪಕ್ಷವು ಇಂಗ್ಲಿಷ್, ಹಿಂದಿ ಹಾಗೂ ಮರಾಠಿ ಮಾಧ್ಯಮಗಳಲ್ಲಿ ತಮ್ಮ ಪಕ್ಷದ ಚಿಹ್ನೆಯಾಗಿ ಗಡಿಯಾರದ ಚಿಹ್ನೆಯನ್ನು ತಮ್ಮ ಪ್ರಚಾರದಲ್ಲಿ ಬಳಸುತ್ತಿರುವುದಾಗಿ ಬಳಸಬೇಕು. ಸುಪ್ರೀಂ ಕೋರ್ಟ್‌ನಲ್ಲಿ ನಿಜವಾದ ಎನ್‌ಸಿಪಿ ಬಣ ಯಾವುದೆಂದು ತೀರ್ಮಾನವಾಗುವವರೆಗೂ ಅದೇ ಚಿಹ್ನೆ ಬಳಸುವಂತೆ ಸೂಚಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

2023ರ ಮಧ್ಯದಲ್ಲಿ, ಎನ್‌ಸಿಪಿಯು ಶರದ್‌ ಪವಾರ್‌ ಹಾಗೂ ಅವರ ಸಂಬಂಧಿ ಅಜಿತ್‌ ಪವಾರ್‌ ಬಣಗಳಾಗಿ ವಿಭಜಿತವಾಯಿತು. ಅಜಿತ್‌ ಪವಾರ್‌ ಎನ್‌ಸಿಪಿಯ ಬಹುತೇಕ ಶಾಸಕರನ್ನು ತಮ್ಮ ಜೊತೆ ಕರೆದುಕೊಂಡು ಆಡಳಿತರೂಢ ಶಿವಸೇನೆ ಹಾಗೂ ಬಿಜೆಪಿ ಪಕ್ಷದೊಂದಿಗೆ ಸೇರ್ಪಡೆಯಾದರು.

ಅಜಿತ್‌ ಪವಾರ್‌ ಸದ್ಯ ಪ್ರಸ್ತುತ ಏಕನಾಥ್ ಶಿಂಧೆ ಸರ್ಕಾರದಲ್ಲಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X