ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ

Date:

Advertisements

“ಬೆಂಗಳೂರಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮಾತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿದರು.

ಮಾರ್ಚ್‌ 19ರಂದು ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್‌ಟಿಪಿ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನ ಕೆಂಗೇರಿ ಕೆರೆಗೆ ತುಂಬಿಸಲು ಕೈಗೊಂಡಿರುವ ಕಾಮಗಾರಿಯ ಸ್ಥಳ ಪರಿಶೀಲನೆ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಹಳ್ಳಿಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ತುಂಬಿಸುವ ಸಲುವಾಗಿ ನಡೆಸುತ್ತಿರುವ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

“ಬೆಂಗಳೂರಿನಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆ ಆಗುತ್ತಿದೆ. ಸಮರ್ಪಕವಾದ ಮಳೆ ನೀರು ಮರುಪೂರಣ ವ್ಯವಸ್ಥೆ ಮಾಡದೇ ಇರುವ ಹಿನ್ನಲೆ, ಹೆಚ್ಚಿನ ಪ್ರಮಾಣದ ನೀರು ಒಳಚರಂಡಿಗೆ ಹರಿಯುತ್ತಿದೆ. ಇದು ಒಳಚರಂಡಿಯ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಅಲ್ಲದೇ, ಅಂತರ್ಜಲ ಮರುಪೂರಣ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಈ ಕೊರತೆಯನ್ನು ತಪ್ಪಿಸಲು ಹಾಗೂ ಭವಿಷ್ಯದ ನೀರಿನ ಅವಶ್ಯಕತೆಯನ್ನು ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಅನಗತ್ಯ ನೀರು ಪೋಲು ತಡೆಗೆ ‘ವಾಟರ್‌ ಟ್ಯಾಪ್ ಮಾಸ್ಕ್‌’ ಅಳವಡಿಕೆ ಕಡ್ಡಾಯ: ಜಲಮಂಡಳಿ ಅಧ್ಯಕ್ಷ

ಸಂಸ್ಕರಿಸಿದ ನೀರನ್ನ ಕೆರೆಗಳಿಗೆ ತುಂಬಿಸುವ ಕಾರ್ಯ ಚುರುಕು ಗೊಳಿಸಲು ಸೂಚನೆ

“ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ನಮ್ಮ ಗುರಿಯಾಗಿದೆ. ಕೆಂಗೇರಿ ಕೆರೆ, ದುಬಾಸಿ ಪಾಳ್ಯ, ಹೊಸಹಳ್ಳಿ ಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ನೀರು ತುಂಬಿಸುವಂತಹ ಕಾಮಗಾರಿಗಳನ್ನು ಚುರುಕುಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X