ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

Date:

Advertisements

ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್‌ ಆಗುವುದಕ್ಕೆ ಕಾರಣನಾಗಿದ್ದ ಫೈಟರ್‌ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಫೈಟರ್‌ ರವಿ ಮುಂದಾಗಿದ್ದರು. ಕಳೆದ ತಿಂಗಳು ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ನೀಡಿದ್ದಾಗ, ಹೆಲಿಪ್ಯಾಡ್‌ ಬಳಿಯೇ ಹೋಗಿ ಮೋದಿ ಅವರನ್ನು ರವಿ ಸ್ವಾಗತಿಸಿದ್ದರು. ಮೋದಿ ಮತ್ತು ರವಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ನೆಟ್ಟಿಗರು ಬಿಜೆಪಿ ಮತ್ತು ಮೋದಿ ಅವರನ್ನು ವ್ಯಂಗ್ಯವಾಗಿ ಟ್ರೋಲ್‌ ಮಾಡಿದ್ದರು.

ಈ ನಡುವೆ ನಾಗಮಂಗಲದ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ರವಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಿಜೆಪಿ, ಶಿವರಾಮೇಗೌಡರ ಪತ್ನಿ ಸುಧಾ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದ ಅಸಮಾಧಾನಗೊಂಡಿದ್ದ ರವಿ ಪಕ್ಷ ತೊರೆದು, ಪಕ್ಷೇತರನಾಗಿ ಸ್ಪರ್ಧಿಸಿದ್ದಾರೆ.

Advertisements

ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ನಾಗಮಂಗಲ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಆ ಸಮಯದಲ್ಲಿಯೂ ಕೆಲವರು ಬಿಜೆಪಿ ಬಾವುಟ ಹಿಡಿದುಕೊಂಡು ಫೈಟರ್ ರವಿಗೆ ಜೈಕಾರ ಕೂಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಇಡೀ ಬಿಜೆಪಿ ಬಿ ಎಲ್ ಸಂತೋಷ್ ಕಪಿಮುಷ್ಠಿಯಲ್ಲಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕ್ರಿಕೆಟ್ ಬೆಟ್ಟಿಂಗ್ ಅವ್ಯವಹಾರ ಸೇರಿದಂತೆ ರವಿ ಹಲವಾರು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಕ್ರಿಕೆಟ್‌ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರವಿ, ಜಾಮೀನು ಪಡೆದು ಹೊರಬಂದಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಆತನಿಗೆ ಬಿಜೆಪಿ ಟಿಕೆಟ್‌ ನೀಡುವುದು ಬಹುತೇಕ ಖಚಿತ ಎನ್ನಲಾಗಿತ್ತು.

ನಾಗಮಂಗಲದಲ್ಲಿ ನಡೆದಿದ್ದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನ್ (ಫೈಟರ್ ರವಿ) ಗೆಲುವು ನಿಶ್ಚಿತವೆಂದು ಹೇಳಿದ್ದರು. ಆದರೆ, ಈಗ ಟಿಕೆಟ್ ನಿರಾಕರಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X