ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

Date:

Advertisements
  • ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ
  • ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿ

ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಇದೇ ಸಂದರ್ಭದಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

“ಈ ಹಿಂದೆ ತಿಳಿಸಿದಂತೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನಸಭೆ ಪ್ರವೇಶ ಬಯಸಿದ್ದೇನೆ. ಗುರುವಾರ ನಾಮಪತ್ರ ಸಲ್ಲಿಸುತ್ತೇನೆ” ಎಂದಿದ್ದಾರೆ.

Advertisements

“ಶಿವಮೊಗ್ಗ ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವ ಉದ್ದೇಶ ನನ್ನದು. ಫ್ಲೆಕ್ಸ್‌ನಲ್ಲಿ ಹೇಳಿದಂತೆ ಹರಕು ಬಾಯಿ ಹೊಲಿದು, ಒಡೆದ ಮನಸ್ಸುಗಳನ್ನು ಒಗ್ಗೂಡಿಸುವ ನನ್ನ ಪ್ರಯತ್ನಕ್ಕೆ ಈಗಾಗಲೇ ಸ್ವಲ್ಪ ಮಟ್ಟಿಗೆ ಫಲ ದೊರೆತಿದೆ. ಅಶಾಂತ ನಗರ ಎಂಬ ಅಪಖ್ಯಾತಿಯಿಂದ ಶಿವಮೊಗ್ಗವನ್ನು ಮುಕ್ತವಾಗಿಸಲು ನಾನು ಬದ್ಧ. ಆ ಮೂಲಕ ನಗರಕ್ಕೆ ಉದ್ಯಮಗಳು ಬರುವಂತೆ ಮಾಡಿ ಉದ್ಯೋಗಾವಕಾಶ ಕಲ್ಪಿಸಬಯಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಗದೀಶ್‌ ಶೆಟ್ಟರ್‌ಗೆ ಹುಬ್ಬಳ್ಳಿ ಜನ ಪಾಠ ಕಲಿಸುತ್ತಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ ಮಾಡುತ್ತಿದ್ದು, ನಗರದ ಜನತೆ ನನ್ನ ಬೆಂಬಲಿಸಲು ಮನವಿ ಮಾಡುತ್ತೇನೆ. ತೆನೆ ಹೊರುತ್ತೇನೋ ಇಲ್ಲವೋ ಎಂಬ ಬಗ್ಗೆ ಕೆಲ ನಾಯಕರ ಜೊತೆ ಮಾತನಾಡಿ ನಿರ್ಧರಿಸುತ್ತೇನೆ. ಅದು ರಾಜ್ಯದ ರಾಜಕೀಯ ಪಕ್ಷದ ನಾಯಕರೊಂದಿಗೆ ಎನ್ನುವ ಮೂಲಕ ಜೆಡಿಎಸ್ ಸೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X