ತುಮಕೂರು | ಬಸ್‌ನಲ್ಲಿ ಆ್ಯಸಿಡ್ ಸಿಡಿದು ಐದಾರು ಮಂದಿಗೆ ಗಾಯ

Date:

Advertisements

ಮಹಿಳೆಯೊಬ್ಬರು ಮನೆಯ ಶೌಚಾಲಯ ಸ್ವಚ್ಚಗೊಳಿಸಲು ಬಸ್‌ನಲ್ಲಿ ಆ್ಯಸಿಡ್ ತೆಗೆದುಕೊಂಡು ಹೋಗುವ ವೇಳೆ ಆ್ಯಸಿಡ್ ಬಾಟಲಿ ಸಿಡಿದು ಐದಾರು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ತುಮಕೂರಿನ ಗೂಳೂರು ಸಮೀಪದ ಪೋದಾರ್ ಶಾಲೆಯ ಬಳಿ ನಡೆದಿದೆ.

ತುಮಕೂರಿನ ಮರಳೂರು ದಿಣ್ಣೆಯ ಜನತಾ ಕಾಲೋನಿಯಲ್ಲಿ ವಾಸವಾಗಿರುವ ಶಕೀಲ ಭಾನು ಎಂಬ ಮಹಿಳೆ, ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಕುಣಿಗಲ್‌ನಿಂದ ತುಮಕೂರಿಗೆ ಬರುವ ಗಣೇಶ್ ಬಸ್
ಹತ್ತಿದ್ದು, ಅವರ ಬಳಿ ಬ್ಯಾಗೊಂದು ಇತ್ತು. ಬಸ್ಸಿನ ಡ್ರೈವರ್ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದರು. ಬಸ್ಸು ಹೊನ್ನುಡಿಕೆಯಿಂದ ಗೂಳೂರು ದಾಟಿ ಪೋದಾರ್ ಶಾಲೆಯ ಬಳಿ ಬರುವ ವೇಳೆಗೆ ಒತ್ತಡಕ್ಕೆ ಒಳಗಾಗಿ ಬ್ಯಾಗಿನಲ್ಲಿ ಇರಿಸಿದ್ದ ಆ್ಯಸಿಡ್ ಇದ್ದ ಬಾಟಲಿ ಸಿಡಿದು ಆಕೆಯ ಅಕ್ಕಪಕ್ಕ ಕುಳಿತಿದ್ದ ಭಾಗ್ಯಮ್ಮ ಸೇರಿದಂತೆ ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವಿ, ನಗರ ಡಿವೈಎಸ್‌ಪಿ ಚಂದ್ರಶೇಖರ್, ಗ್ರಾಮಾಂತರ ಇನ್ಸ್‌ಪೆಕ್ಟರ್ ಮೋಹನ್ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಲ್ಲದೆ, ಗಾಯಾಳು ಚಿಕಿತ್ಸೆ ಪಡೆಯುತ್ತಿರುವ ಸರ್ಕಾರಿ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳಿಂದ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.

Advertisements

ಘಟನೆ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವಿ ಸುದ್ದಿಗಾರರೊಂದಿಗೆ ಮಾತನಾಡಿ, “ಖಾಸಗಿ ಬಸ್ಸೊಂದು ಕುಣಿಗಲ್‌ನಿಂದ ತುಮಕೂರಿಗೆ ಬರುವ ವೇಳೆ ಗೂಳೂರು ಸಮೀಪದ ಪೋದಾರ್ ಶಾಲೆಯ ಬಳಿ ಬಾಟಲಿಯಿಂದ ಹೊರ ಚಲ್ಲಿದ ಆ್ಯಸಿಡ್ ಸಿಡಿದು ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೊನ್ನುಡಿಕೆ ಗುಜರಿ ಶಾಫ್‌ನಲ್ಲಿ ಕೆಲಸ ಮಾಡುವ ಶಕೀಲಭಾನು ಎಂಬ ಮಹಿಳೆ ಮನೆಯಲ್ಲಿನ ಶೌಚಾಲಯ ಸ್ವಚ್ಚಗೊಳಿಸಲು ಅರ್ಧ ಲೀಟರ್ ಪ್ಲಾಸ್ಟಿಕ್ ಕೂಲ್ ಡ್ರಿಂಕ್ಸ್ ಬಾಟಲಿಯಲ್ಲಿ ತೆಗೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸೊಳ್ಳೆಗಳ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ, ಚರಂಡಿಗಳ ಹೂಳೆತ್ತಲು ಕ್ರಮಕ್ಕೆ ಮನವಿ

“ಆಕೆಯಿಂದ ಆ್ಯಸಿಡ್‌ ತುಂಬಿದ್ದ ಬಾಟಲಿ ವಶಪಡಿಸಿಕೊಳ್ಳಲಾಗಿದೆ. ಪ್ರಥಮ ಚಿಕಿತ್ಸೆಗಾಗಿ
ಎಲ್ಲ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ‌ ದಾಖಲಿಸಲಾಗಿದೆ. ಅಲ್ಲದೆ, ಆ್ಯಸಿಡ್‌ ತೆಗೆದುಕೊಂಡು ಹೋಗುತ್ತಿದ್ದ ಮಹಿಳೆಯ ಪೂರ್ವಾಪರ ಹುಡುಕುವ ಪ್ರಯತ್ನ ನಡೆದಿದೆ. ಕೈಗಾರಿಕಾ ಉದ್ದೇಶಕ್ಕಾಗಿ ಆ್ಯಸಿಡ್ ಬಳಕೆಯಾಗುತ್ತಿರುವ ಮಾಹಿತಿ ಇದೆ. ಸ್ಕ್ರಪ್ ಅಂಗಡಿಗೆ ಆ್ಯಸಿಡ್ ಬಳಕೆಗೆ ಪರವಾನಗಿ ಇತ್ತೇ
ಎಂಬುದನ್ನೂ ಕೂಡ ನಮ್ಮ ಅಧಿಕಾರಿಗಳು ಪರಿಶೀಲನೆ ನಡೆಸುತಿದ್ದಾರೆ” ಎಂದು ವಿವರ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X