ಉಡುಪಿ | ಬೀದಿನಾಯಿಗೆ ಅನ್ನ ಹಾಕಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ; ದಸಂಸ ಖಂಡನೆ

Date:

Advertisements

ಬೀದಿ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ದಲಿತ ಮಹಿಳೆಗೆ ಪ್ರಬಲ ಜಾತಿಯ ಚಂದ್ರಕಾಂತ್‌ ಭಟ್ಟ ಎಂಬಾತ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.

ಉಡುಪಿ ತಾಲೂಕಿನ ಇಂದ್ರಾಳಿ ರೈಲ್ವೇ ಸ್ಟೇಷನ್ ಪಕ್ಕದಲ್ಲಿ ವಾಸಿಸುತ್ತಿದ್ದ ದಲಿತ ಮಹಿಳೆ ಬೇಬಿ ಎನ್ನುವವರು ನಿತ್ಯವೂ ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದರು. ಬುಧವಾರವೂ ಕೂಡ ತನ್ನ ದೈನಂದಿನ ದಿನಚರಿಯಂತೆ ಬೀದಿ ನಾಯಿಗಳಿಗೆ ಅನ್ನಹಾಕಿ ಸಲಹಿ ತನ್ನ ಪ್ರಾಣಿ ಪ್ರೀತಿ ಔದಾರ್ಯ ಮೆರೆಯುತ್ತಿದ್ದ ಬೇಬಿಯವರು ಇಂದ್ರಾಳಿಯಲ್ಲಿ ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದ ಸಂದರ್ಭದಲ್ಲಿ ಚಂದ್ರಕಾಂತ ಭಟ್ಟ ಎನ್ನುವವರು ರೀಪಿನಿಂದ ತಲೆಗೆ ಹೊಡೆದಿದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ಹೊಡೆದಿದ್ದು, ಬೇಬಿಯವರ ತಲೆಗೆ ತೀವ್ರವಾದ ಪೆಟ್ಟಾಗಿದೆ. ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲೂ ಮೇಲ್ವರ್ಗದವರ ಊಳಿಗಮಾನ್ಯ ಪದ್ದತಿಯ ಮನಸ್ಥಿತಿ ಹಾಗೇ ಮುಂದುವರಿದಿದೆ ಎನ್ನುವುದು ಮತ್ತೊಮ್ಮೆ ಸಾಬಿತಾಗಿದೆ.

Advertisements

ಘಟನೆಯ ಸುದ್ಧಿ ತಿಳಿದ ಕೂಡಲೇ ದಸಂಸ‌ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ನೇತ್ರತ್ವದಲ್ಲಿ ದಸಂ‌ಸ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿದ್ದು‌, ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ಘಟನೆಯ ಮಾಹಿತಿ ಪಡೆದರು.

ದಲಿತ ಸಂಘರ್ಷ ಸಮಿತಿಯು ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದು, “ಆರೋಪಿಗೆ ಯಾವ ಕಾರಣಕ್ಕೂ ಜಾಮೀನು ಸಿಗಬಾರದು. ಮೇಲ್ವರ್ಗದವರ ಗೂಂಡಾಗಿರಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿದೆ. ಈಗ ಉಡುಪಿಯ ಪೊಲೀಸ್ ವ್ಯವಸ್ಥೆ ತೀರಾ ಹದಗೆಟ್ಟಿದ್ದು, ದಲಿತರಿಗೆ ರಕ್ಷಣೆಯೇ ಇಲ್ಲವಾಗಿದೆ. ಆರೋಪಿಗೆ ಸರಿಯಾದ ಶಿಕ್ಷೆ ಆಗಬೇಕು” ಎಂದು ಆಗ್ರಹಿಸಿದರು.

“ತಲೆಗೆ ಹೊಡೆದು ಕೊಲೆಗೆ ಪ್ರಯತ್ನಿಸಿದ ಆರೋಪಿಗೆ ಸಣ್ಣ ಪುಟ್ಟ ಕೇಸುಗಳನ್ನು ಹಾಕಿ ಆತನಿಗೆ ಜಾಮೀನು ಸಿಗುವಂತೆ ಪ್ರಯತ್ನಿಸಿದರೆ ದಸಂಸ ದೊಡ್ಡ ಪ್ರತಿಭಟನೆಗೆ ಕರೆ ಕೊಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

ದಸಂಸ ಪದಾಧಿಕಾರಿಗಳಾದ ಸುಂದರ್ ಮಾಸ್ತರ್, ಮಂಜುನಾಥ ಗಿಳಿಯಾರು, ಶ್ಯಾಮರಾಜ್ ಬಿರ್ತಿ, ವಾಸುದೇವ ಮುದೂರು, ಭಾಸ್ಕರ್ ಮಾಸ್ತರ್, ಪರಮೇಶ್ವರ ಉಪ್ಪೂರು, ಶ್ಯಾಮಸುಂದರ್ ತೆಕ್ಕಟ್ಟೆ, ಶ್ರೀಪತಿ ಕುಂಜಿಬೆಟ್ಟು, ಶ್ರೀಧರ್, ರಾಜು ಬೆಟ್ಟಿನಮನೆ, ಮಂಜುನಾಥ್ ಬಾಳ್ಕದ್ರು, ಉಡುಪಿ ನಗರ ಸಭಾ ಸದಸ್ಯ ರಾಜು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X