ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ರಾಜೀನಾಮೆ

Date:

Advertisements

ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.

“ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿಗಳು ತಿಳಿಸಿದ್ದಾರೆ.

Advertisements

ರಾಜೀನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮರಿತಿಬ್ಬೇಗೌಡ, “ಜನತಾದಳದ ವರಿಷ್ಠ ಹೆಚ್​ ಡಿ ದೇವೆಗೌಡ, ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಅವರು ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ಇದರಿಂದ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು” ಎಂದರು.

“ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ಜನತಾದಳದಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದೆ. ಈ ಅವಧಿಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಪ್ರಾರಂಭವಾಗಿದ್ದು ಜನತಾ ದಳದಿಂದ. ಕೆಲವು ಸಲ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ನನಗೆ ಸಿಗಲಿಲ್ಲ” ಬೇಸರ ಹೊರಹಾಕಿದರು.

“ನಾನು ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X