ಬೀದರ್‌ | ಏ. 14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಆರಂಭ

Date:

Advertisements

ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏ.14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಶುರು ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕರಾದ ವೈಜಿನಾಥ ಸೂರ್ಯವಂಶಿ, ವಿಠಲ್ ದಾಸ್ ಪ್ಯಾಗೆ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದಲಿತ ಸಮುದಾಯದ ಸರ್ವಾಂಗೀಣ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಡಾ.ಬಿ.ಆರ್.‌ಅಂಬೇಡ್ಕರ್  ಅವರ ಜಯಂತಿ ದಿನವೇ ಬುದ್ಧ ಬಸವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಿರ್ದಿಷ್ಟ ನೀತಿಗಳ ತಳಹದಿಯಲ್ಲಿ ಕಾರ್ಯ ಚಟುವಟಿಕೆ ನಡೆಸುವ ಘನವಾದ ಉದ್ದೇಶದಿಂದ ಈ ಸಂಸ್ಥೆ ಹುಟ್ಟು ಹಾಕಲಾಗುತ್ತಿದೆ” ಎಂದರು.

“ಏ.2 ರಿಂದ 7 ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ 6 ದಿನಗಳ ಕ್ರೀಡಾಕೂಟ ಆಯೋಜಿಸಲಾಗುವುದು. ಕುಸ್ತಿ, ಕಬಡ್ಡಿ, ಅಥ್ಲೆಟಿಕ್ಸ್, ವಾಲಿಬಾಲ್ ಹಾಗೂ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗುವುದು. ಈ ಮೂಲಕ ಪ್ರಖರ ಪ್ರತಿಭೆಗಳ ಗುರುತಿಸುವ ಕಾರ್ಯ ಮಾಡುವ ಉದ್ದೇಶವಿದೆ. ಇದರ ಪ್ರಚಾರದ ಚಟುಟಿಕೆಗಳಿಗಾಗಿ ಸಂಸ್ಥೆಯ ಸಂಯೋಜಕರ ತಂಡ ರಚಿಸಿ ತಾಲೂಕಿನ ಎಲ್ಲ ಊರುಗಳಿಗೆ ಹೋಗಿ ಅಂಬೇಡ್ಕರ ಭವನ, ಬುದ್ಧ ವಿಹಾರಗಳನ್ನು ಸ್ವಚ್ಚಗೊಳಿಸುವುದು. ಬುದ್ಧ, ಬಸವ, ಅಂಬೇಡ್ಕರರ ಸದಾಶಯಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯ ಮಾಡುವ ಗುರಿಯಿದೆ” ಎಂದರು.

Advertisements

“ದಲಿತ ಸಮುದಾಯದ ಆರ್ಥಿಕ, ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಶಕ್ತಿ ವರ್ಧಿಸುವುದು, ವಿವಿಧ ಬಗೆಯ ಕ್ರೀಡಾಕೂಟ ಆಯೋಜಿಸಿ ಉನ್ನತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸಕಲ ರೀತಿಯಲ್ಲೂ ಬೆಂಬಲಿಸಿ ವೃತ್ತಿಪರ ಕ್ರೀಡಾಪಟು ಆಗಲು ಸಹಾಯ ಮಾಡುವುದು. ನಗರದಲ್ಲಿ ಸುಸಜ್ಜಿತ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಹಾಗೂ ಕ್ರೀಡಾ ಅಕಾಡೆಮಿ ಸ್ಥಾಪಿಸಲಾಗುವುದು” ಎಂದು ಮಾಹಿತಿ ನೀಡಿದರು.

“ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ, ಶಿಷ್ಯವೇತನಗಳ ಒದಗಿಸುವುದು ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲಾಗುವುದು. ಸಮಾಜದಲ್ಲಿ ಸಮುದಾಯದ ಧ್ವನಿಯಾಗಿ ಅವರ ಹಕ್ಕುಗಳ ರಕ್ಷಣೆ ಮತ್ತು ಸಮಾನತೆಯ ಹೋರಾಟದಲ್ಲಿ ಸಹಾಯ ಮಾಡುವುದು. ಸಾಮಾಜಿಕ ನ್ಯಾಯವನ್ನು ಒದಗಿಸುವ ಪ್ರಯತ್ನ ಮಾಡುವುದು. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವದ ಹಾಗೂ ಸಂವಿಧಾನದ ಆಶಯಗಳ ಸಂಕೇತವಾದ ಸಮಾಜ ಕಟ್ಟಲು ಶ್ರಮಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಲ್ಲಿ ತೀವ್ರ ಬರ; ನೀರಿಗಾಗಿ ತೆಲಂಗಾಣಕ್ಕೆ ಹೊರಟ ತಾಂಡಾ ಜನರು

“ಬಾಬಾ ಸಾಹೇಬ್ ಅಂಬೇಡ್ಕರ ಅವರ ಜಯಂತಿ ಉತ್ಸವವನ್ನು ಅದ್ಧೂರಿಯಿಂದ ಮೌಲ್ಯಾಧಾರಿತ, ಅರ್ಥಗರ್ಭಿತವಾಗಿ, ರಚನಾತ್ಮಕ, ಧನಾತ್ಮಕ ಹಾಗೂ ಕ್ರಿಯಾಶೀಲ ಚಟುವಟಿಕೆಗಳು ಆಯೋಜಿಸಿ ಸಮಾಜಕ್ಕೊಂದು ಸಕರಾತ್ಮಕ ಸಂದೇಶ ಕೊಡುವ ಪ್ರಯತ್ನ ನಮ್ಮದಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X