ಹಣದ ಕೊರತೆಯಿಂದ ಕಾಂಗ್ರೆಸ್‌ ಗೋಳಾಡಲಿ ಎನ್ನುವುದೇ ಮೋದಿ ಸರ್ಕಾರದ ದುರುದ್ದೇಶ: ಸಿದ್ದರಾಮಯ್ಯ

Date:

Advertisements

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿ, ₹210 ಕೋಟಿ ದಂಡ ವಿಧಿಸಿರುವುದನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

“ಚುನಾವಣಾ ಬಾಂಡ್‌ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಸಿಎಂ ಕೋರಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X