ರಾಯಚೂರು | ಸಾರ್ವಜನಿಕ ಶೌಚಾಲಯವಿಲ್ಲದೆ ಹೈರಾಣು; ಕಚೇರಿ ಕೆಲಸಕ್ಕೆ ಬರುವವರ ಆಕ್ರೋಶ

Date:

Advertisements

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ, ಮೂತ್ರಾಲಯ ಕೊರತೆಯಿಂದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಪಟ್ಟಣಕ್ಕೆ ಬರುವ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಅಂದಾಜು 25 ರಿಂದ 30 ಸಾವಿರ ಜನ ಸಂಖ್ಯೆಯನ್ನು ಹೊಂದಿದ ಪಟ್ಟಣದ ವ್ಯಾಪ್ತಿಗೆ 52 ಹಳ್ಳಿಗಳು ಮತ್ತು19 ಕ್ಯಾಂಪ್‌ಗಳು ಸೇರಿರುತ್ತವೆ. ಪಟ್ಟಣ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರ, ನೆಮ್ಮದಿ ಕೇಂದ್ರ, ಪೊಲೀಸ್ ಠಾಣೆ, ಶಾಲಾ ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ವಸತಿ ಶಾಲೆಗಳು ಸೇರಿದಂತೆ ಹಲವು ಪ್ರಮುಖ ಸರ್ಕಾರಿ ಕಚೇರಿಗಳಿವೆ.

ಸರ್ಕಾರಿ ಕಚೇರಿಗಳಿಗೆ ಹಾಗೂ ಮಾರುಕಟ್ಟೆಗೆ ಖರೀದಿಗಾಗಿ ಹಳ್ಳಿ ಮತ್ತು ಕ್ಯಾಂಪ್‌ಗಳಿಂದ ಬರುವ ಜನರು ಮೂತ್ರಾಲಯ ಸಮಸ್ಯೆಯಿಂದ ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

Advertisements

“ಹಳೇ ಬಸ್ ನಿಲ್ದಾಣದ ಹತ್ತಿರವಿದ್ದ ಒಂದು ಶೌಚಾಲಯವನ್ನು ರಸ್ತೆ ನಿರ್ಮಾಣ ಸಂದರ್ಭದಲ್ಲಿ ತೆರವುಗೊಳಿಸಲಾಗಿದೆ. ಹೀಗಾಗಿ ಮೂತ್ರ ವಿಸರ್ಜನೆಗೆ 1 ಕಿ ಮೀ ದೂರದ ಪೆಟ್ರೋಲ್ ಬಂಕ್ ಮತ್ತು ಹೊಸ ಬಸ್ ನಿಲ್ದಾಣದ ಹತ್ತಿರ ಬಯಲು ಜಾಗ ಹುಡುಕಿಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ” ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

“ಬೈಕ್ ಸವಾರರು ಮತ್ತು ವಾಹನಗಳಲ್ಲಿ ತೆರಳುವವರು ಊರಿಂದ ಆಚೆಗೆ ವಾಹನ ನಿಲ್ಲಿಸಿ ನಿಸರ್ಗದ ಕರೆಗೆ ಓಗೊಡುತ್ತಾರೆ. ಪುರುಷರು ಎಲ್ಲೆಂದರಲ್ಲಿ ಚರಂಡಿ ಹತ್ತಿರ ಅಥವಾ ಗೋಡೆ ಮರೆಯಲ್ಲಿ ನಿಂತು ಮೂತ್ರ ಮಾಡುತ್ತಾರೆ. ಆದರೆ, ಹಳ್ಳಿಗಳಿಂದ ಬರುವ ಮಹಿಳೆಯರು, ಮಕ್ಕಳು, ರೋಗಿಗಳು ಮೂತ್ರ ವಿಸರ್ಜನೆಗೆ ಬಯಲು ಜಾಗ ಹುಡುಕಿಕೊಂಡು ಓಣಿಯ ಸಂಧಿಗೊಂದಿಗಳಲ್ಲಿ ಹೋಗುವಂತಾಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಶ್ವರಪ್ಪ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

“ಹಲವು ಸಂಘ ಸಂಸ್ಥೆಗಳು ಮತ್ತು ಸ್ಥಳೀಯ ಮುಖಂಡರು ಶೌಚಾಲಯ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸ್ಥಳೀಯ ಆಡಳಿತ ಹಾಗೂ ಜನ ಪ್ರತಿನಿಧಿಗಳು ಈವರೆಗೂ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X