ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

Date:

Advertisements

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕಲ್ವಕುಂಟ್ಲ ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಮಾರ್ಚ್ 15ರಂದು ಬಂಧಿಸಿದೆ. ಕವಿತಾ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ನೀಡಲು ನಿರಾಕರಿಸಿದೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕರ ಬಂಧನದ ಬಳಿಕ ಬಿಜೆಪಿಗೆ 30 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದ್ದ ಅರಬಿಂದೋ ಫಾರ್ಮಾ

Advertisements

ಮಾರ್ಚ್ 15ರಿಂದ ಮಾರ್ಚ್ 23ರವರೆಗೆ ಜಾರಿ ನಿರ್ದೇಶನಾಲಯವು 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. “ಈ ಬಂಧನವು ಅಕ್ರಮ, ಅಸಾಂವಿಧಾನಿಕ” ಎಂದು ವಾದಿಸಿರುವ ಕವಿತಾ, “ಇದು ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 19 ಅನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇನ್ನು ಜಾರಿ ನಿರ್ದೇಶನಾಲಯವು ಈ ಪ್ರಕರಣದಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ಈ ನಡುವೆ ಚುನಾವಣಾ ಆಯೋಗ ಚುನಾವಣಾ ಬಾಂಡ್ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಇದೇ ಪ್ರಕರಣದಲ್ಲಿ ತನ್ನ ನಿರ್ದೇಶಕ ಶರತ್ ಚಂದ್ರ ರೆಡ್ಡಿ ಬಂಧನಕ್ಕೊಳಗಾದ ಬಳಿಕ ಬಿಜೆಪಿಗೆ ಅರಬಿಂದೋ ಫಾರ್ಮಾ 30 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ತಿಳಿದುಬಂದಿದೆ. ಇನ್ನು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ 2023ರ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X