ದತ್ತು ಮಗು ಪ್ರಕರಣ | ಸೋನು ಶ್ರೀನಿವಾಸ್ ಗೌಡ 4 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ

Date:

Advertisements

ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಅವರ ಬಂಧನವಾಗಿದೆ. ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಸೋನು ಗೌಡ ಅವರನ್ನು ಮಾರ್ಚ್‌ 22ರಂದು ನ್ಯಾಯಾಧೀಶರ ಮುಂದೆ ಹಾಜರಿಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಕಾಲ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ ನೀಡಿದೆ.

ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಪಾರ್ಟ್‌ಮೆಂಟ್ ಫ್ಲಾಟ್‌ನಲ್ಲಿಂದಲೇ ಪೊಲೀಸರು ಸೋನು ಗೌಡ ಅವರನ್ನು ಮಾರ್ಚ್‌ 22ರಂದು ಬೆಳಿಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೇ ದಿನ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಸಿಜೆಎಂ ಕೋರ್ಟ್ ಮಾರ್ಚ್ 25ರವರೆಗೆ ಸೋನುಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

ಇಂದಿನಿಂದ ನಾಲ್ಕು ದಿನಗಳವರೆಗೂ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಬಾಲಕಿ ಪರಿಚಯವಾಗಿದ್ದ ಸ್ಥಳ, ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ, ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಮತ್ತೆ, ಮಾರ್ಚ್​ 25ರಂದು ಸೋನು ಶ್ರೀನಿವಾಸ್​ ಗೌಡ ಅವರನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ.

Advertisements

ಸದ್ಯ ಸೋನುಗೌಡ ವಿಚಾರಣೆ ನಡೆಸುತ್ತಿರುವ ಪೊಲೀಸರು, ರಾತ್ರಿ ಸಮಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರನ್ನು ಇರಿಸಿ, ಮಾರ್ಚ್‌ 23 ರಂದು ಬೆಳಿಗ್ಗೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಪಿಎಲ್‌ ಪಂದ್ಯ: ರಾತ್ರಿ 11.30ರವರೆಗೆ ಮೆಟ್ರೋ ರೈಲು ಸಂಚಾರ ವಿಸ್ತರಣೆ

ಏನಿದು ಪ್ರಕರಣ?

ಸೋನು ಶ್ರೀನಿವಾಸ್ ಗೌಡ ಅಕ್ರಮವಾಗಿ 8 ವರ್ಷದ ಮಗುವನ್ನು ಇಟ್ಟುಕೊಂಡಿದ್ದಾರೆ. ಅಲ್ಲದೇ ಆ ಮಗುವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾಳೆ. ಯಾವುದೇ ಕಾನೂನಿನ ನಿಯಮಗಳನ್ನು ಪಾಲಿಸದೇ ಈ ರೀತಿ ಮಾಡುವುದು ಅಪರಾಧ ಎಂದು ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಮಾರ್ಚ್‌ 22ರಂದು ಬಂಧಿಸಿದ್ದಾರೆ.

ಸೋನು ಗೌಡ ಬಾಲಕಿಯ ಜೊತೆಗೆ ತೆಗೆದುಕೊಂಡ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X