ಗದಗ | ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ 

Date:

Advertisements

ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸಿ-ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಆಮಿಷಗಳನ್ನು ಒಡ್ಡಿದರೆ, ಹಣ, ಉಡುಗೊರೆ, ಕೂಪನ್‌ಗಳನ್ನು ವಿತರಣೆ, ಮದ್ಯದ ಆಸೆ ಮತ್ತು ಆಮಿಷ ಒಡ್ಡಿದರೆ ಮತದಾರರು ಸಿ-ವಿಜಿಲ್ ಆ್ಯಪ್ ಮೂಲಕ ದೂರು ನೀಡಬಹುದು.

“ಅನುಮತಿ ಅನುಮತಿ ಇಲ್ಲದಿದ್ದರೂ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಂಟಿಸುವುದು, ಬಂದೂಕು ತೋರಿಸಿ ಬೆದರಿಕೆ ಹಾಕುವುದು, ಆಸ್ತಿ ವಿರೂಪಗೊಳಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿದರೂ ಆ್ಯಪ್ ಮೂಲಕ ದೂರು ನೀಡಬಹುದು.

Advertisements

“ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧವಿದ್ದರೂ ಪ್ರಚಾರ ಮಾಡುವುದು, ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಚೋದನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದರೆ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲು ಅವಕಾಶವಿದೆ” ಎಂದು ಹೇಳಿದರು.

ಸಿ-ವಿಜಲ್ ಮೂಲಕ ಸಲ್ಲಿಕೆಯಾಗುವ ದೂರುಗಳಿಂದ ಘಟನೆ ನಡೆದ ಸ್ಥಳದ ಮಾಹಿತಿ ಲಭ್ಯವಾಗುವುದರಿಂದ ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ತಲುಪಬಹುದು.

ಸಾರ್ವಜನಿಕರು ಪ್ಲೇ ಸ್ಟೋರ್‌ನಲ್ಲಿ ಸಿ-ವಿಜಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಬಳಸಬಹುದು. ಅಕ್ರಮಗಳ ಕುರಿತು ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ಅಪ್‌ಲೋಡ್‌ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು” ಎಂದರು.

“ಸಿ-ವಿಜಲ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಗಳಿದ್ದು, ಮತದಾನ ಮುಕ್ತಾಯವಾಗುವರೆಗೂ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ” ಎಂದರು.

“ದೂರು ದಾಖಲಾದ ಕೂಡಲೇ ಪರಿಶೀಲಿಸಿ ದೂರು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ರವಾನಿಸಿ ದೂರಿನ ಕುರಿತು ತುರ್ತು ಕ್ರಮ ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. ಗರಿಷ್ಠ 100 ನಿಮಿಷಗಳ ಒಳಗೆ ದೂರುಗಳನ್ನು ಇತ್ಯರ್ಥಪಡಿಸಲಾಗುತ್ತದೆ” ಎಂದು ಹೇಳಿದರು.

“ಸಾರ್ವಜನಿಕರು ಸಿ-ವಿಜಿಲ್ ಆ್ಯಪ್ ಮಾತ್ರವಲ್ಲದೆ ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆಮಾಡಿ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಬಹುದು. ಈ ಮೂಲಕ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಬಹುದಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವೋಟರ್‌ ಹೆಲ್ಪ್‌ಲೈನ್‌ ಆ್ಯಪ್ 

ವೋಟರ್‌ ಹೆಲ್ಪ್‌ಲೈನ್‌ ಆ್ಯಪ್‍ನಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಬಹುದು, ಮತದಾರ ಪಟ್ಟಿಯಲ್ಲಿ ಹೆಸರಿಲ್ಲದಿದ್ದಲ್ಲಿ ನಮೂನೆ-6ನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಸರು, ವಿಳಾಸ, ಭಾವಚಿತ್ರ, ಲಿಂಗ ಏನಾದರೂ ತಿದ್ದುಪಡಿ ಮಾಡಬೇಕಾದಲ್ಲಿ ನಮೂನೆ-8ನ್ನು ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. ನಿಮ್ಮ ಡಿಜಿಟಲ್(ಭಾವಚಿತ್ರವುಳ್ಳ) ವೋಟರ್ ಸ್ಲೀಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಚುನಾವಣೆ ಸಂಬಂಧಿತ ಅಪ್‌ಡೇಟೆಡ್ ಮಾಹಿತಿ ಪಡೆಯಬಹುದಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಂಟ್ರೋಲ್ ರೂಂ ಹಾಗೂ ಸಹಾಯವಾಣಿ ಸ್ಥಾಪನೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಜಿಲ್ಲೆಯಲ್ಲಿ ಅಹವಾಲು ಅಥವಾ ದೂರುಗಳನ್ನು ಸಲ್ಲಿಸಲು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕೆಳಕಂಡ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಜಿಲ್ಲಾಧಿಕಾರಿ ಕಾರ್ಯಾಲಯದ ಕಂಟ್ರೋಲ್ ರೂಂ ದೂರವಾಣಿ ಸಂಖೈ (ಡಿಇಒ ಆಫೀಸ್) : 08372-239177, 08372-1950; ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08372-238300, 9480804400 ; ಜಿಲ್ಲಾ ಅಬಕಾರಿ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆ 08372-221129, 18004252329; ಜಿಲ್ಲಾ ವಾಣಿಜ್ಯ ತೆರಿಗೆ ಕಂಟ್ರೋಲ್ ರೂಂ ಸಂಖ್ಯೆ 9008937878, 08372-238307 . ಈ ಮೇಲ್ಕಂಡ ಕಂಟ್ರೋಲ್ ರೂಂ ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ‌ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X