ಕೇಜ್ರಿವಾಲ್ ಬಂಧನ | ಪ್ರಜಾಪ್ರಭುತ್ವದಲ್ಲಿ ಮತ್ತೊಂದು ಕರಾಳ ದಿನ: ಕೆಸಿಆರ್

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಸಂಬಂಧ ಕೇಂದ್ರ ವಿರುದ್ಧ ಬಿಆರ್‌ಎಸ್‌ ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದ್ದಾರೆ. ‘ಇದು ಪ್ರಜಾಪ್ರಭುತ್ವದ ಮೊತ್ತೊಂದ ಕರಾಳ ದಿನ’ ಎಂದು ಕರೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಪುತ್ರಿ, ಎಂಎಲ್‌ಸಿ ಕೆ ಕವಿತಾ ಬಂಧನ ವಿಚಾರವಾಗಿ ಕೆಸಿಆರ್ ಮೌನವಾಗಿದ್ದರು. ಇದೀಗ, ಕೇಜ್ರಿವಾಲ್ ಬಂಧನದ ಬಳಿಕ ಮೌನ ಮುರಿದಿದ್ದಾರೆ. “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳನ್ನು ತೊಡೆದುಹಾಕುವ ಏಕೈಕ ಉದ್ದೇಶದಿಂದ ಕೆಲಸ ಮಾಡುತ್ತಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಮತ್ತು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಬಂಧನಗಳು ಇದನ್ನೇ ಸೂಚಿಸುತ್ತವೆ” ಎಂದು ಹೇಳಿದ್ದಾರೆ.

“ಕೇಂದ್ರದ ಬಿಜೆಪಿ ಸರ್ಕಾರವು ದೇಶದ ವಿರೋಧ ಪಕ್ಷಗಳನ್ನು ನಿರ್ಮೂಲನೆ ಮಾಡಲು ಕೇಂದ್ರೀಯ ಸಂಸ್ಥೆಗಳಾದ ಇಡಿ, ಸಿಬಿಐ ಮತ್ತು ಐಟಿಗಳನ್ನು ಪ್ಯಾದೆಯಾಗಿ ಬಳಸುತ್ತಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಬಿಜೆಪಿಯ ಕೃತ್ಯಗಳನ್ನು ಬಿಆರ್‌ಎಸ್ ಖಂಡಿಸುತ್ತದೆ” ಎಂದು ಕೆಸಿಆರ್ ಹೇಳಿದ್ದಾರೆ.

Advertisements

“ಕೇಜ್ರಿವಾಲ್ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಕೈಬಿಡಬೇಕು. ಬಂಧಿಸಿರುವವರನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಬಿಜೆಪಿ ಮತ್ತು ಅದರ ನೀತಿಗಳನ್ನು ವಿರೋಧಿಸಿದ್ದರಿಂದ ಕವಿತಾ ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕುವ ಮೂಲಕ ಇಡಿ ಬಂಧಿಸಿದೆ” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ವಿರುದ್ಧ ಇದ್ದುದರಿಂದಲೇ ತಮ್ಮ ಮಗಳನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ, ಇಡಿ ತಮ್ಮ ಮಗಳನ್ನು ಬಂಧಿಸುತ್ತಿರಲಿಲ್ಲ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X